ಪ್ರಾತಿನಿಧಿಕ ಚಿತ್ರ 
ರಾಜ್ಯ

ನಿಯಮ ಉಲ್ಲಂಘನೆಯನ್ನು ಸರಿಪಡಿಸಿಕೊಳ್ಳಲು ರಾಜ್ಯದ ಅನಧಿಕೃತ ಶಾಲೆಗಳಿಗೆ ಕಾಲಾವಕಾಶ: ಶಿಕ್ಷಣ ಇಲಾಖೆ

ರಾಜ್ಯದಲ್ಲಿನ ಅನಧಿಕೃತ ಶಾಲೆಗಳಿಗೆ ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ನಿಯಮಗಳ ಉಲ್ಲಂಘನೆಯನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಶಾಲೆಗಳಿಗೆ ಅಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ನಿಯಮಗಳ ಉಲ್ಲಂಘನೆಯನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದಲ್ಲಿ 1,600 ಅನಧಿಕೃತ ಶಾಲೆಗಳನ್ನು ಗುರುತಿಸಿದೆ. ಅವುಗಳಲ್ಲಿ 937 ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿವೆ. ಅಂತಹ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟಿದೆ ಎಂಬುದು ತಿಳಿದಿಲ್ಲ. ಇಲಾಖೆ ಮೂಲಗಳು ವಿದ್ಯಾರ್ಥಿಗಳು ಲಕ್ಷಗಳಲ್ಲಿರಬಹುದು ಎಂದಿವೆ. 

'ನಾವು ಅಂತಹ ಶಾಲೆಗಳ ಸಮೀಕ್ಷೆಯನ್ನು ನಡೆಸಿದ್ದೇವೆ ಮತ್ತು ಡಿಎಸ್ಇಎಲ್‌ಗೆ ವರದಿಯನ್ನು ಸಲ್ಲಿಸಿದ್ದೇವೆ' ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ಆರ್ ವಿಶಾಲ್ ಹೇಳಿದರು.

'ಶಾಲಾ ಶಿಕ್ಷಣಕ್ಕೆ ತೊಂದರೆ ಕೊಡಲು ಬಯಸುವುದಿಲ್ಲ'

ಬೋರ್ಡ್ ಪರೀಕ್ಷೆಯ ನಂತರ ಅಂತಹ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಇದಕ್ಕೂ ಮೊದಲು ಹೇಳಿದ್ದರು.

ಅಂತಹ ಶಾಲೆಗಳ ವಿರುದ್ಧದ ಸಾಮಾನ್ಯ ದೂರುಗಳೆಂದರೆ, ಸರ್ಕಾರದ ಸಂಯೋಜನೆಯಿಲ್ಲದೆ ತರಗತಿಗಳನ್ನು ನಡೆಸುವುದು, ಸಂಯೋಜನೆ ಕುರಿತು ಪೋಷಕರನ್ನು ತಪ್ಪುದಾರಿಗೆಳೆಯುವುದು, ಯಾವುದೇ ಅನುಮತಿಯಿಲ್ಲದ ಗ್ರೇಡ್‌ಗಳಿಗೆ ತರಗತಿಗಳನ್ನು ನಡೆಸುವುದು ಹಾಗು ಕಟ್ಟಡಗಳು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ. ಇಂತಹ ಶಾಲೆಗಳು ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಒಂದಾದ ಪ್ರಮುಖ ಸಂಸ್ಥೆಯು ನಗರದಲ್ಲಿ ಮತ್ತು ಇತರೆಡೆ ಯಾವುದೇ ಸಂಯೋಜನೆಯಿಲ್ಲದ ಅನೇಕ ಶಾಖೆಗಳನ್ನು ಹೊಂದಿದೆ. ಆದರೂ, ಅದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಇಎಸ್ಇ) ನಿಂದ ಸಂಯೋಜಿತ ಎಂದು ಹೇಳಿಕೊಳ್ಳುತ್ತದೆ.

ಮೂಲಗಳ ಪ್ರಕಾರ, ಅನಧಿಕೃತ ಶಾಲೆಗಳನ್ನು ಸರಿಪಡಿಸಲು ಸಮಯ ನೀಡಲಾಗುತ್ತದೆ. 'ನಾವು ಮಕ್ಕಳ ಶಾಲಾ ಶಿಕ್ಷಣವನ್ನು ಅಡ್ಡಿಪಡಿಸಲು ಬಯಸುವುದಿಲ್ಲ. ಅಂತಹ ಶಾಲೆಗಳನ್ನು ಮುಚ್ಚುವುದು ಅಥವಾ ತರಗತಿಗಳನ್ನು ತಕ್ಷಣವೇ ನಿಲ್ಲಿಸುವುದು ಅರ್ಥವಲ್ಲ. ಏಕೆಂದರೆ, ಇದು ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಸಂಬಂಧಿತ ದಾಖಲೆಗಳನ್ನು ಸಲ್ಲಿಸಲು ನಾವು ಅವರಿಗೆ ಸಮಯವನ್ನು ನೀಡುತ್ತೇವೆ. ಇದರಿಂದ ಅವರು ತರಗತಿಗಳನ್ನು ಮುಂದುವರಿಸಲು ಅವಕಾಶ ಮಾಡಿಕೊಡಲಾಗುತ್ತದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT