ಪ್ರತಿಭಟನಾ ನಿರತರು ಬಿಜೆಪಿ ಧ್ವಜಗಳನ್ನು ತೆರವುಗೊಳಿಸಿದರು 
ರಾಜ್ಯ

ಒಳಮೀಸಲಾತಿಗೆ ವಿರೋಧ; ಬಿಜೆಪಿ ಧ್ವಜ ತೆರವು, ಮುಖಂಡರು ತಾಂಡಾಗಳಿಗೆ ಪ್ರವೇಶಿಸದಂತೆ ತಡೆ

ಬಾಗಲಕೋಟೆ ಭಾಗದ ಹಲವು ಲಂಬಾಣಿ ತಾಂಡಾಗಳಲ್ಲಿ ಸಮುದಾಯದ ಹಲವು ವರ್ಗಗಳ ಯುವ ಮುಖಂಡರು ಬ್ಯಾನರ್‌ಗಳನ್ನು ಕಟ್ಟಿದ್ದು, ಬಿಜೆಪಿ ಮುಖಂಡರ ತಾಂಡಾಗಳ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ.

ಬೆಳಗಾವಿ: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ಲಂಬಾಣಿ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯು ಮಂಗಳವಾರ ಬಾಗಲಕೋಟೆಯಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಬಾಗಲಕೋಟೆ ಭಾಗದ ಹಲವು ಲಂಬಾಣಿ ತಾಂಡಾಗಳಲ್ಲಿ ಸಮುದಾಯದ ಹಲವು ವರ್ಗಗಳ ಯುವ ಮುಖಂಡರು ಬ್ಯಾನರ್‌ಗಳನ್ನು ಕಟ್ಟಿದ್ದು, ಬಿಜೆಪಿ ಮುಖಂಡರ ತಾಂಡಾಗಳ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ.

ಬಾಗಲಕೋಟೆ ಸಮೀಪದ ಮುಚ್ಚಂಡಿ ತಾಂಡಾದಲ್ಲಿ ಪ್ರತಿಭಟನಾಕಾರರು ರಾಜ್ಯದ ಬಿಜೆಪಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಲವಾರು ಕಂಬಗಳು ಮತ್ತು ಮನೆಗಳಲ್ಲಿ ಬಿಜೆಪಿ ಧ್ವಜಗಳನ್ನು ತೆರವುಗೊಳಿಸಿದರು.

ಆಚನೂರ, ನೀಲಾನಗರ, ಜಡ್ರಾಮಕುಂಟಿ, ಲವಲೇಶ್ವರ, ಗುಲ್ಬಾಳ್, ಶಿರಗುಪ್ಪಿ, ಅಮೀನಗಡ, ಕಮತಗಿ, ಬಿಳಗಿ ಸೇರಿದಂತೆ ನಾನಾ ತಾಂಡಾಗಳಿಗೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರವೇಶ ಮಾಡದಂತೆ ತಡೆಯಲು ನಿರ್ಧರಿಸಿ ಬ್ಯಾನರ್‌ ಹಾಕಲಾಗಿದೆ ಮತ್ತು ಬಿಜೆಪಿ ಮುಖಂಡರನ್ನು ತಾಂಡಾ ಪ್ರವೇಶಿಸದಂತೆ ತಡೆಯಲು ಅವುಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಲಂಬಾಣಿ ತಾಂಡಾಗಳ ಹಲವಾರು ಯುವ ಮುಖಂಡರು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TMC ಎಲ್ಲಾ ಮಿತಿಗಳನ್ನು ಮೀರಿದೆ, ರಾಷ್ಟ್ರಪತಿಗಳಿಗೆ ಅವಮಾನ ನಾಚಿಕೆಗೇಡಿನ ಸಂಗತಿ: ದೀದಿ ವಿರುದ್ಧ ಮೋದಿ ಕೆಂಡ

ಇರಾನ್ ಮೇಲೆ ಇಂದು ತುಂಬಾ 'ಪ್ರಬಲ ದಾಳಿ': ಟ್ರಂಪ್ ವಾರ್ನಿಂಗ್; ಹಿಜ್ಬುಲ್ಲಾ ನಿಶ್ಯಸ್ತ್ರಗೊಳಿಸಿ- ಲೆಬನಾನ್‌ಗೆ ಇಸ್ರೇಲ್ ಎಚ್ಚರಿಕೆ!

'ರಷ್ಯಾ ತೈಲ ಖರೀದಿಗೆ 30 ದಿನಗಳ ಅನುಮತಿ ಕೊಡ್ತೀವಿ'; ಅಮೆರಿಕ ಉದ್ಧಟತನಕ್ಕೆ ಕೆರಳಿದ ಭಾರತ ಹೇಳಿದ್ದೇನು!

ಅಮೆರಿಕಾದ 300 ಮಿಲಿಯನ್ ಡಾಲರ್ ಮೌಲ್ಯದ THAAD ರಡಾರ್ ವ್ಯವಸ್ಥೆ ಇರಾನ್ ದಾಳಿಯಲ್ಲಿ ಧ್ವಂಸ!

TVK ಅಧಿಕಾರಕ್ಕೆ ಬಂದ್ರೆ ಮದುವೆಗೆ 8 ಗ್ರಾಂ ಚಿನ್ನ, ಉಚಿತ ಬಸ್, ತಿಂಗಳಿಗೆ 2,500 ರೂ.; ಭರವಸೆಗಳ ಸರಮಾಲೆಯನ್ನೇ ಘೋಷಿಸಿದ ವಿಜಯ್

SCROLL FOR NEXT