ತ್ರಿವೇಣಿ-ಜಾನಕಿ 
ರಾಜ್ಯ

ಬಳ್ಳಾರಿಗೆ ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್; ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ‌.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ‌.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆಯಿತು‌. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ, ಉಪ ಮೇಯರ್ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಿತ್ತು. ಇನ್ನು ಪಾಲಿಕೆಯಲ್ಲಿ 39 ಸದಸ್ಯರಿದ್ದು, ಸಂಸದರು, ಶಾಸಕರ ಮತಗಳಿಂದ ಬಿಜೆಪಿ 16 ಮತಗಳನ್ನು ಹೊಂದಿದ್ದರೆ ಕಾಂಗ್ರೆಸ್ 28 ಮತಗಳನ್ನು ಹೊಂದಿತ್ತು.

ಮೇಯರ್ ಸ್ಥಾನಕ್ಕೆ ಕಾಂಗ್ರೆದ್ ನಿಂದ 35ನೇ ವಾರ್ಡಿನ ಸದಸ್ಯ ವಿ.ಕುಬೇರ, 7ನೇ ವಾರ್ಡಿನ ಉಮದೇವಿ ಶಿವರಾಜ್ ಮತ್ತು ಡಿ.ತ್ರಿವೇಣಿ ಅವರು, ಬಿಜೆಪಿಯಿಂದ 16ನೇ ವಾರ್ಡಿನ ನಾಗರತ್ನ ಅವರು ನಾಮ‌ಪತ್ರ ಸಲ್ಲಿಸಿದ್ದರು. ಈ ಮಧ್ಯೆ ಕಾಂಗ್ರೆಸ್ ಪಕ್ಷದ ಕುಬೇರ ಮತ್ತು ಉಮಾದೇವಿ ನಾಮ ಪತ್ರ ಪಡೆದಿದ್ದು ಡಿ.ತ್ರಿವೇಣಿ ಮತ್ತು ನಾಗರತ್ನ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಹಾಜರಿದ್ದ 44 ಸದಸ್ಯರ ಪೈಕಿ ತ್ರಿವೇಣಿ 28 ಮತಗಳನ್ನು ಪಡೆದರೆ ನಾಗರತ್ನ ಅವರು 16 ಮತಗಳನ್ನು ಪಡೆದಿದ್ದರು. 

ಮೇಯರ್ ಆಗಿ ತ್ರಿವೇಣಿ ಆಯ್ಕೆಯನ್ನು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಘೋಷಣೆ ಮಾಡಿದರು. ಪಾಲಿಕೆ ಆಯುಕ್ತ ರುದ್ರೇಶ್, ಎಡಿಸಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT