ತ್ರಿವೇಣಿ-ಜಾನಕಿ 
ರಾಜ್ಯ

ಬಳ್ಳಾರಿಗೆ ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್; ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ‌.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ‌.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆಯಿತು‌. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ, ಉಪ ಮೇಯರ್ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಿತ್ತು. ಇನ್ನು ಪಾಲಿಕೆಯಲ್ಲಿ 39 ಸದಸ್ಯರಿದ್ದು, ಸಂಸದರು, ಶಾಸಕರ ಮತಗಳಿಂದ ಬಿಜೆಪಿ 16 ಮತಗಳನ್ನು ಹೊಂದಿದ್ದರೆ ಕಾಂಗ್ರೆಸ್ 28 ಮತಗಳನ್ನು ಹೊಂದಿತ್ತು.

ಮೇಯರ್ ಸ್ಥಾನಕ್ಕೆ ಕಾಂಗ್ರೆದ್ ನಿಂದ 35ನೇ ವಾರ್ಡಿನ ಸದಸ್ಯ ವಿ.ಕುಬೇರ, 7ನೇ ವಾರ್ಡಿನ ಉಮದೇವಿ ಶಿವರಾಜ್ ಮತ್ತು ಡಿ.ತ್ರಿವೇಣಿ ಅವರು, ಬಿಜೆಪಿಯಿಂದ 16ನೇ ವಾರ್ಡಿನ ನಾಗರತ್ನ ಅವರು ನಾಮ‌ಪತ್ರ ಸಲ್ಲಿಸಿದ್ದರು. ಈ ಮಧ್ಯೆ ಕಾಂಗ್ರೆಸ್ ಪಕ್ಷದ ಕುಬೇರ ಮತ್ತು ಉಮಾದೇವಿ ನಾಮ ಪತ್ರ ಪಡೆದಿದ್ದು ಡಿ.ತ್ರಿವೇಣಿ ಮತ್ತು ನಾಗರತ್ನ ಅವರ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಹಾಜರಿದ್ದ 44 ಸದಸ್ಯರ ಪೈಕಿ ತ್ರಿವೇಣಿ 28 ಮತಗಳನ್ನು ಪಡೆದರೆ ನಾಗರತ್ನ ಅವರು 16 ಮತಗಳನ್ನು ಪಡೆದಿದ್ದರು. 

ಮೇಯರ್ ಆಗಿ ತ್ರಿವೇಣಿ ಆಯ್ಕೆಯನ್ನು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಘೋಷಣೆ ಮಾಡಿದರು. ಪಾಲಿಕೆ ಆಯುಕ್ತ ರುದ್ರೇಶ್, ಎಡಿಸಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

SCROLL FOR NEXT