ಬೆಳಗಾವಿಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಂಡ ಹಣ 
ರಾಜ್ಯ

ಬೆಳಗಾವಿಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 70 ಲಕ್ಷ ರೂ. ದಾಖಲೆರಹಿತ ಹಣ ವಶ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯದ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯದ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ರಾಜಕೀಯ ನಾಯಕರ ನಡೆ-ನುಡಿಗಳು ಮುಖ್ಯವಾಗುತ್ತದೆ. ರಾಜ್ಯದ ಹಲವು ಚೆಕ್ ಪೋಸ್ಟ್ ಗಳಲ್ಲಿ ಅಕ್ರಮವಾಗಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ಮತ್ತು ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಬೆಳಗಾವಿಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 70 ಲಕ್ಷ ದಾಖಲೆರಹಿತ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಕಾರಿನಲ್ಲಿ ಹಣ ತರಲಾಗುತ್ತಿತ್ತು. ಹಣಕ್ಕೆ ಸಂಬಂಧಿಸಿದಂತೆ ಕಾರಿನ ಚಾಲಕರ ಬಳಿ ಯಾವುದೇ ದಾಖಲೆಗಳಿರಲಿಲ್ಲ. ಕಾಗವಾಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದೆಡೆ, ರಾಯಭಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷ 30 ಸಾವಿರ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT