ಪ್ರೊ. ನರೇಂದ್ರ ನಾಯ್ಕ್ 
ರಾಜ್ಯ

ಪ್ರೊ. ನರೇಂದ್ರ ನಾಯ್ಕ್ ಗೆ ನೀಡಿದ್ದ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ 

ಸಾಮಾಜಿಕ ಕಾರ್ಯಕರ್ತರೂ ಆಗಿರುವ ಪ್ರೊ. ನರೇಂದ್ರ ನಾಯ್ಕ್ ಅವರಿಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಮಂಗಳೂರು: ಸಾಮಾಜಿಕ ಕಾರ್ಯಕರ್ತರೂ ಆಗಿರುವ ಪ್ರೊ. ನರೇಂದ್ರ ನಾಯ್ಕ್ ಅವರಿಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
 
ನರೇಂದ್ರ ನಾಯ್ಕ್ ಅವರು ವಿಚಾರವಾದಿ ಸಂಘಗಳು (FIRA). ಅಧ್ಯಕ್ಷರಾಗಿದ್ದು, ನರೇಂದ್ರ ಧಾಬೋಲ್ಕರ್, ಗೋವಿಂದ್ ಪನ್ಸಾರೆ, ಎಂಎಂ ಕಲಬುರಗಿ ಹಾಗೂ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.  ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿಗೆ ಆರೋಪಿಗಳ ಹಿಟ್ ಲಿಸ್ಟ್ ನಲ್ಲಿ ಪ್ರೊ. ನರೇಂದ್ರ ನಾಯ್ಕ್ ಹೆಸರು ಇದ್ದದ್ದು ಬೆಳಕಿಗೆ ಬಂದಿತ್ತು. 

ತಮಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯ ಬಗ್ಗೆ ಹೇಳಿಕೆ ನೀಡಿರುವ ನರೇಂದ್ರ ನಾಯ್ಕ್, ನನಗೆ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಇಂದು ಬೆಳಿಗ್ಗೆ ಏಕಾ ಏಕಿ ಹಿಂಪಡೆಯಲಾಗಿದೆ. ಹಿಂಪಡೆದ ಬಳಿಕ ಈ ಮಾಹಿತಿಯನ್ನು ತಮಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಮಾರ್ಚ್ ನ ಮೊದಲ ವಾರದಲ್ಲಿ ರಾಜ್ಯ ಸರ್ಕಾರದ ಸಲಹೆಯನ್ನು ಉಲ್ಲೇಖಿಸಿದ್ದ ಪತ್ರವೊಂದು ಡಿಸಿಪಿ (ಕಾನೂನು ಸುವ್ಯವಸ್ಥೆ) ಅವರಿಂದ ಬಂದಿತ್ತು. ಇದರಲ್ಲಿ ನಾನು ನನ್ನ ಭದ್ರತೆಗಾಗಿ ಹಣ ಪಾವತಿ ಮಾಡಬೇಕಾಗುತ್ತದೆ ಎಂದು ತಿಳಿಸಲಾಗಿತ್ತು. ನಾನು ಯಾವುದೇ ಭದ್ರತೆಗೂ ಕೇಳಿರಲಿಲ್ಲ ಹಾಗೂ ನನ್ನ ಸ್ವಂತ ರಕ್ಷಣೆಗಾಗಿ ಪಾವತಿ ಮಾಡುವಷ್ಟು ಶ್ರೀಮಂತ ವ್ಯಕ್ತಿ ಅಲ್ಲ. ಸಂಬಂಧಪಟ್ಟ ಅಧಿಕಾರಿಯೊಬ್ಬರನ್ನು ಭೇಟಿ ಮಾಡಿ ಇವೆಲ್ಲವನ್ನೂ ವಿವರಿಸಿ, ಪತ್ರವನ್ನೂ ನೀಡಿದ್ದೆ ಎಂದು ನರೇಂದ್ರ ನಾಯ್ಕ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT