ಸಂಗ್ರಹ ಚಿತ್ರ 
ರಾಜ್ಯ

ಪಾಕಿಸ್ತಾನದ ಮಹಿಳೆಗೆ ಮರುಜೀವ ಕೊಟ್ಟ ಬೆಂಗಳೂರಿನ ವೈದ್ಯರು

ಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪಾಕಿಸ್ತಾನದ ಮಹಿಳೆಯೊಬ್ಬರಿಗೆ ಬೆಂಗಳೂರಿನ ವೈದ್ಯರು ಮರುಜೀವ ನೀಡಿದ್ದಾರೆ.

ಬೆಂಗಳೂರು: ಗಂಭೀರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪಾಕಿಸ್ತಾನದ ಮಹಿಳೆಯೊಬ್ಬರಿಗೆ ಬೆಂಗಳೂರಿನ ವೈದ್ಯರು ಮರುಜೀವ ನೀಡಿದ್ದಾರೆ.

ಪಾಕಿಸ್ತಾನ ಪ್ರಜೆಯಾಗಿರುವ ಆರಿಫಾ ಬಾನೊ (43) ಎಂಬುವವರಿಗೆ ಬೆಂಗಳೂರಿನ ವೈದ್ಯರು ಮರಜೀವ ನೀಡಿದ್ದಾರೆ. ಅರಿಫಾ ಅವರು ಕಳದ 27 ವರ್ಷಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಪಾಕಿಸ್ತಾನದಿಂದ ಬೆಂಗಳೂರಿಗೆ ಬಂದಿದ್ದರು.

ಪಾಕಿಸ್ತಾನದಲ್ಲಿದ್ದ ವೈದ್ಯರು ಅರಿಫಾ ಅವರನ್ನು ಪರೀಕ್ಷೆಗೊಳಪಡಿಸಿದಾಗ ತೆರೆದ ಹೃದಯ ಶಸ್ತ್ರಚಿಕಿತ್ಸೆಗೊಳಗಾಗುವಂತೆ ಸೂಚಿಸಿದ್ದಾರೆ.  ಆದರೆ, ಆರಂಭದಲ್ಲಿ ಅರಿಫಾ ಚಿಕಿತ್ಸೆಗೆ ನಿರಾಕರಿಸಿದ್ದಾರೆ. ನಂತರ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಸಲಹೆಗಲ ಮೇರೆಗೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲು ನಿರ್ಧರಿಸಿದ್ದಾರೆ.

ಅರಿಫಾ ಅವರಿಗೆ 16ನೇ ವಯಸ್ಸಿನಲ್ಲಿಯೇ ಮಿಟ್ರಲ್ ರಿಗರ್ಗಿಟೇಶನ್ ಇರುವುದು ಪತ್ತೆಯಾಗಿದೆ. ಈ ವೇಳೆ ಕವಾಟದ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಲಾಗಿದೆ. ಸಾಮಾನ್ಯವಾಗಿ ಈ ಸಮಸ್ಯೆಗೆ ತೆರೆದ ಹೃದಯದ ಶಸ್ತ್ರಚಿಕಿತ್ಸೆಯ ಅಗತ್ಯವಿರುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ವೈದ್ಯರ ಸಲಹೆಗಳನ್ನು ನಿರಾಕರಿಸುತ್ತಲೇ ಬರುತ್ತಿದ್ದ ಅರಿಫಾ ಅವರಿಗೆ ನಂತರ ದಿನಗಳಲ್ಲಿ ಉಸಿರಾಟದ ಸಂಮಸ್ಯೆ ಎದುರಾಗಿದೆ. 1.5 ವರ್ಷಗಳಲ್ಲಿ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಇದು ಅವರ ದೈನಂದಿನ ದಿನಚರಿಯ ಮೇಲೂ ಗಮನಾರ್ಹ ಪರಿಣಾಮ ಬೀರಿದೆ.

ಇದೀಗ ಅರಿಫಾ ಅವರಿಗೆ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 72 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅರಿಫಾ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ನಾರಾಯಣ ಹೃದಯಾಲಯದ ಹಿರಿಯ ಸಲಹೆಗಾರ (ಇಂಟರ್ವೆನ್ಷನಲ್ ಕಾರ್ಡಿಯಾಲಜಿ) ಡಾ.ಉದಯ್ ಖಾನೋಲ್ಕರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT