ಬಿಜೆಪಿ ಚುನಾವಣಾ ಪ್ರಣಾಳಿಕೆ 
ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ 2023: 'ರಾಜ್ಯದ ಜನತೆಯಿಂದಲೇ, ಜನತೆಗಾಗಿ, ಜನತೆಗೋಸ್ಕರ' ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಜೆಪಿ ನಡ್ಡಾ ಅವರು, ರಾಜ್ಯದ 224 ಕ್ಷೇತ್ರದ ಜನತೆ, ತಜ್ಞರ ಅಭಿಪ್ರಾಯ ಪಡೆದು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಬಿಜೆಪಿಯದ್ದು ಜನಪರ ಪ್ರಣಾಳಿಕೆಯಾಗಿದೆ, ಜನರಿಗೆ ಏನೆಲ್ಲಾ ಒಳ್ಳೆಯದನ್ನು ಮಾಡಲು ಸಾಧ್ಯವಿದೆ, ಅದನ್ನು ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಸಚಿವ ಸುಧಾಕರ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ