ಸಿದ್ದರಾಮಯ್ಯ 
ರಾಜ್ಯ

ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ: ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೂ ಮುನ್ನ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ. 

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಾಲು,  5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಯೋಜನೆ ಸರಿಯಿದೆಯಾದರೂ ಆದರೆ ಅದಕ್ಕೆ ಸಂಪನ್ಮೂಲಗಳ ಕ್ರೌಡಿಕರಣ ಹೇಗೆ ಮಾಡುತ್ತೀರ ಅದನ್ನು ಹೇಳಿ, ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಲೆಕ್ಕಾಚಾರವಿಲ್ಲದ ಪ್ರಣಾಳಿಕೆ ಎನ್ನುತ್ತಿದ್ದರು. ಈಗ ಬಿಜೆಪಿಯವರು ತಮ್ಮ ಪ್ರಣಾಳಿಕೆ ಜಾರಿಗೆ ಯಾವ ಲೆಕ್ಕಾಚಾರ ಹೊಂದಿದ್ದಾರೆ ಎಂಬುದನ್ನು ಹೇಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT