ಸಂಗ್ರಹ ಚಿತ್ರ 
ರಾಜ್ಯ

ಪೂರಕ ಪರೀಕ್ಷೆಯ ಅಂಕಗಳನ್ನು ಸಿಇಟಿಗೆ ಪರಿಗಣಿಸಲಾಗುತ್ತದೆ: ಗೊಂದಲಗಳಿಗೆ ತೆರೆ ಎಳೆದ ಕೆಇಎ

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದು, ಪೂರಕ ಪರೀಕ್ಷೆಯ ಅಂಕಗಳನ್ನೂ ಸಿಇಟಿಗೆ ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಬೆಂಗಳೂರು: ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದು, ಪೂರಕ ಪರೀಕ್ಷೆಯ ಅಂಕಗಳನ್ನೂ ಸಿಇಟಿಗೆ ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಪೂರಕ ಪರೀಕ್ಷೆಯ ಅಂಕಗಳನ್ನು ಸಿಇಟಿಗೆ ಪರಿಗಣಿಸಲಾಗುತ್ತದೆಯೋ, ಇಲ್ಲವೋ ಎಂಬ ಗೊಂದಲಗಳು ಪೋಷಕರಲ್ಲಿ ಮನೆ ಮಾಡಿತ್ತು. ಈ ಬಗ್ಗೆ ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಾಧಿಕಾರವನ್ನು ಸಂಪರ್ಕಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಪ್ರಾಧಿಕಾರವು, "ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶಗಳಲ್ಲಿ ಕಡಿಮೆ ಅಂಕಗಲನ್ನು ಪಡೆದ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಇಟಿ 2023 ಪರೀಕ್ಷೆಗೆ ಹಾಜರಾಗಲು ಅರ್ಹತೆಯ ಮಾನದಂಡಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರಾಧಿಕಾರವನ್ನು ಸಂಪರ್ಕಿಸುತ್ತಿದ್ದು, ಸಿಇಟಿ ರ್ಯಾಂಕ್‌ಗಳಿಗೆ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವವರು ಸಿಇಟಿ ಪರೀಕ್ಷೆಗೆ ಹಾಜರಾದರೆ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆ ಅಂಕಗಳನ್ನು ಪರಿಗಣಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ವಿದ್ಯಾರ್ಥಿಗಳಾಗಲೀ, ಪೋಷಕರಾಗಲೀ ಗೊಂದಲಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿಕೊಂಡಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಣಿ ಮಾಡಲು ಏಪ್ರಿಲ್ 21ರಿಂದಲೇ ಅವಕಾಶ ಕಲ್ಪಿಸಲಾಗಿದೆ. ದಂಡರಹಿತವಾಗಿ ನೋಂದಣಿ ಮಾಡಿಕೊಳ್ಳಲು ಏಪ್ರಿಲ್ 26 ಕೊನೆಯ ದಿನವಾಗಿತ್ತು. ದಂಡಸಹಿತ ನೋಂದಣಿ ಮಾಡಿಕೊಳ್ಳಲು ಏಪ್ರಿಲ್ 27 ರಿಂದ ಮೇ 2ರ ವರೆಗೆ ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT