ಹಾರಂಗಿ ಜಲಾಶಯ 
ರಾಜ್ಯ

ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ!

ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ.

ಕೊಡಗು: ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ.
 
ಕಳೆದ ವರ್ಷ ಇದೇ ಅವಧಿಗೆ ಹೋಲಿಕೆ ಮಾಡಿದರೆ ಆಗ ಇದ್ದ ನೀರಿನ ಮಟ್ಟಕ್ಕಿಂತಲೂ ಈಗ 2 ಟಿಎಂಸಿಯಷ್ಟು ನೀರು ಕುಸಿತ ಕಂಡಿದೆ. ತಾಪಮಾನದ ಏರಿಕೆ ಹಾಗೂ ಮುಂಗಾರು ಪೂರ್ವ ಮಳೆಗಳ ಕೊರತೆಯಿಂದಾಗಿ ನೀರಿನ ಮಟ್ಟ ಕ್ಷೀಣಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದರೆ ಈಗಲೇ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.  ಆದರೆ, ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಪೂರ್ವ ಮುಂಗಾರು ವಿಫಲವಾದರೆ, ಅದು ನೀರಿನ ಸಮಸ್ಯೆಗೆ ಕಾರಣವಾಗಬಹುದು ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಹಾರಂಗಿಯಲ್ಲಿ ಕಳೆದ ವರ್ಷ ಇದೇ ಸಮಯದಲ್ಲಿ 4.62 ಟಿಎಂಸಿ ನೀರು ಇದ್ದರೆ, ಈಗ ಅದು 1.95 ಟಿಎಂಸಿಗೆ ಇಳಿದಿದೆ. ಇದಲ್ಲದೆ, ಜಲಾಶಯವು 2018 ರಿಂದ ಯಾವುದೇ ಪರಿಹಾರ ಕಾರ್ಯಕ್ಕೆ ಸಾಕ್ಷಿಯಾಗಿಲ್ಲ ಮತ್ತು ನೈಸರ್ಗಿಕ ವಿಕೋಪ ಪರಿಸ್ಥಿತಿಯ ಪರಿಣಾಮವಾಗಿ ಜಲಾಶಯದೊಳಗೆ ಹೂಳು ಹೆಚ್ಚಿದೆ.

1.95 ಟಿಎಂಸಿಯಲ್ಲಿ ಹೂಳೂ ಸೇರಿದ್ದು, ಕಾವೇರಿ ಜಲಾನಯನ ಪ್ರದೇಶಗಳಾದ ಭಾಗಮಂಡಲ, ತಲಕಾವೇರಿ ಮತ್ತು ಇತರ ಗ್ರಾಮಗಳಲ್ಲಿ ಮಳೆಯ ನಂತರ ನೀರಿನ ಮಟ್ಟ ಹೆಚ್ಚಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಏತನ್ಮಧ್ಯೆ, ಜಿಲ್ಲೆಯ ರೈತರ ಮನವಿ ಮೇರೆಗೆ ಜಲಾಶಯದಿಂದ ಸ್ವಲ್ಪ ಭಾಗವನ್ನು ನೀರಾವರಿ ಉದ್ದೇಶಕ್ಕಾಗಿ ಬಿಡಲಾಗುತ್ತಿದ್ದು, ನೀರಿನ ಮಟ್ಟ ಮತ್ತಷ್ಟು ಕಡಿಮೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT