ಹಾರಂಗಿ ಜಲಾಶಯ 
ರಾಜ್ಯ

ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ!

ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ.

ಕೊಡಗು: ಹಾರಂಗಿ ಜಲಾಶಯಲದಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿದ್ದು, ಮುಂಗಾರು ಪೂರ್ವದಲ್ಲಿ ವಾಡಿಕೆಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿತ ಕಂಡಿದೆ.
 
ಕಳೆದ ವರ್ಷ ಇದೇ ಅವಧಿಗೆ ಹೋಲಿಕೆ ಮಾಡಿದರೆ ಆಗ ಇದ್ದ ನೀರಿನ ಮಟ್ಟಕ್ಕಿಂತಲೂ ಈಗ 2 ಟಿಎಂಸಿಯಷ್ಟು ನೀರು ಕುಸಿತ ಕಂಡಿದೆ. ತಾಪಮಾನದ ಏರಿಕೆ ಹಾಗೂ ಮುಂಗಾರು ಪೂರ್ವ ಮಳೆಗಳ ಕೊರತೆಯಿಂದಾಗಿ ನೀರಿನ ಮಟ್ಟ ಕ್ಷೀಣಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದರೆ ಈಗಲೇ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.  ಆದರೆ, ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಪೂರ್ವ ಮುಂಗಾರು ವಿಫಲವಾದರೆ, ಅದು ನೀರಿನ ಸಮಸ್ಯೆಗೆ ಕಾರಣವಾಗಬಹುದು ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಹಾರಂಗಿಯಲ್ಲಿ ಕಳೆದ ವರ್ಷ ಇದೇ ಸಮಯದಲ್ಲಿ 4.62 ಟಿಎಂಸಿ ನೀರು ಇದ್ದರೆ, ಈಗ ಅದು 1.95 ಟಿಎಂಸಿಗೆ ಇಳಿದಿದೆ. ಇದಲ್ಲದೆ, ಜಲಾಶಯವು 2018 ರಿಂದ ಯಾವುದೇ ಪರಿಹಾರ ಕಾರ್ಯಕ್ಕೆ ಸಾಕ್ಷಿಯಾಗಿಲ್ಲ ಮತ್ತು ನೈಸರ್ಗಿಕ ವಿಕೋಪ ಪರಿಸ್ಥಿತಿಯ ಪರಿಣಾಮವಾಗಿ ಜಲಾಶಯದೊಳಗೆ ಹೂಳು ಹೆಚ್ಚಿದೆ.

1.95 ಟಿಎಂಸಿಯಲ್ಲಿ ಹೂಳೂ ಸೇರಿದ್ದು, ಕಾವೇರಿ ಜಲಾನಯನ ಪ್ರದೇಶಗಳಾದ ಭಾಗಮಂಡಲ, ತಲಕಾವೇರಿ ಮತ್ತು ಇತರ ಗ್ರಾಮಗಳಲ್ಲಿ ಮಳೆಯ ನಂತರ ನೀರಿನ ಮಟ್ಟ ಹೆಚ್ಚಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಏತನ್ಮಧ್ಯೆ, ಜಿಲ್ಲೆಯ ರೈತರ ಮನವಿ ಮೇರೆಗೆ ಜಲಾಶಯದಿಂದ ಸ್ವಲ್ಪ ಭಾಗವನ್ನು ನೀರಾವರಿ ಉದ್ದೇಶಕ್ಕಾಗಿ ಬಿಡಲಾಗುತ್ತಿದ್ದು, ನೀರಿನ ಮಟ್ಟ ಮತ್ತಷ್ಟು ಕಡಿಮೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: ಡಿಎಂಕೆಗೆ 'SIR'ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ, ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ! ಕ್ಷಮೆಗೆ ಪಟ್ಟು, ಬಿಜೆಪಿ ಪ್ರತಿಭಟನೆ

ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!

ಸಂಸತ್ ಅಧಿವೇಶನ: ಟೀ ಪಾರ್ಟಿಯಲ್ಲಿ ಪ್ರಧಾನಿ, ರಾಜನಾಥ್ ಸಿಂಗ್ ಎದುರು "ಗಿಡಮೂಲಿಕೆ ರಹಸ್ಯ" ಬಿಚ್ಚಿಟ್ಟ ಪ್ರಿಯಾಂಕ ಗಾಂಧಿ; ಮೋದಿ ಪ್ರಿತಿಕ್ರಿಯೆ ಏನು?

SCROLL FOR NEXT