ಮಂಗಳವಾರ ಚಿತ್ರದುರ್ಗದಲ್ಲಿ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ. 
ರಾಜ್ಯ

ಭಾರತದಲ್ಲಿ ಭಯೋತ್ಪಾದನೆಯ ಬೆನ್ನೆಲುಬನ್ನು ಬಿಜೆಪಿ ಮುರಿದಿದೆ: ಪ್ರಧಾನಿ ಮೋದಿ

ವಿರೋಧ ಪಕ್ಷವೊಂದು ಭಯೋತ್ಪಾದಕರು ಹಾಗೂ ಭಯೋತ್ಪಾದನೆಯ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದು, ಬಿಜೆಪಿ ಭಯೋತ್ಪಾದನೆಯ ಬೆನ್ನಲುಬನ್ನೇ ಮುರಿದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು.

ಚಿತ್ರದುರ್ಗ: ವಿರೋಧ ಪಕ್ಷವೊಂದು ಭಯೋತ್ಪಾದಕರು ಹಾಗೂ ಭಯೋತ್ಪಾದನೆಯ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದು, ಬಿಜೆಪಿ ಭಯೋತ್ಪಾದನೆಯ ಬೆನ್ನಲುಬನ್ನೇ ಮುರಿದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ, ವಾಗ್ದಾಳಿ ನಡೆಸಿದರು.

ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಘಳು ಭಯೋತ್ಪಾದನೆಯನ್ನು ಬೆಂಬಲಿಸುತ್ತಿದ್ದು, ಎರಡೂ ಪಕ್ಷಗಳಿಗೆ ಮತ ಪಡೆಯುವ ಹಕ್ಕಿಲ್ಲ ಎಂದು ಹೇಳಿದರು.

2019ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಕುರಿತು ಕಾಂಗ್ರೆಸ್ ಸೇನಾಪಡೆಗಳಿಂದ ಸಾಕ್ಷ್ಯಾಧಾರ ಕೇಳಿತ್ತು. ಬಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಉಗ್ರರು ಹತರಾಗಿರುವ ವಿಚಾರ ತಿಳಿದ ಬಳಿಕ ಕಾಂಗ್ರೆಸ್ ನಾಯಕರು ಕಣ್ಣೀರಿಟ್ಟಿದ್ದರು. ಆದರೆ, ಅದೇ ನಾಯಕರು ಸೇನಾಪಡೆಗಳ ಸಾಮರ್ಥ್ಯವನ್ನು ಪ್ರಶ್ನಿಸಿದ್ದರು ಎಂದು ತಿಳಿಸಿದರು.

“ಭಯೋತ್ಪಾದನೆಯ ಬೆನ್ನು ಮುರಿದು ತುಷ್ಟೀಕರಣದ ರಾಜಕಾರಣವನ್ನು ನಿಲ್ಲಿಸಿದ್ದು ಬಿಜೆಪಿ. ಕರ್ನಾಟಕ ನಂಬರ್ ಒನ್ ಆಗಬೇಕಾದರೆ ಸುರಕ್ಷಿತವಾಗಿರುವುದು ಕೂಡ ಮುಖ್ಯ. ಭಯೋತ್ಪಾದನೆಯನ್ನು ಉತ್ತೇಜಿಸುವ ಕಾಂಗ್ರೆಸ್-ಜೆಡಿಎಸ್ ಎಂದಿಗೂ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವುದಿಲ್ಲ. ಕಾಂಗ್ರೆಸ್ ತನ್ನ ವಾರಂಟಿಯನ್ನು ಕಳೆದುಕೊಂಡಿದೆ. ಅವರ ಭರವಸೆಗೆ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ. ತಾನು ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಹೀಗಾಗಿಯೇ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಈ ಭರವಸೆಗಳು ಜಾರಿಯಾದರೆ ಇಡೀ ಖಜಾನೆ ಖಾಲಿಯಾಗುತ್ತದೆ ಮತ್ತು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳುತ್ತವೆ. ಇದಕ್ಕೆ ನಮ್ಮ ಮುಂದಿನ ಪೀಳಿಗೆಗಳು ನಮ್ಮನ್ನು ಶಪಿಸುತ್ತವೆ ಎಂದರು.

2012ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಇದೇ ರೀತಿಯ ಯೋಜನೆಗಳನ್ನು ತಂದಿತ್ತು, ಆದರೆ ನನ್ನ ರಾಜ್ಯದ ಜನರು ಅದನ್ನು ತಿರಸ್ಕರಿಸಿದರು. ಇಂದು ಕಾಂಗ್ರೆಸ್‌ ತನ್ನ ಪಕ್ಷದ ಬಾವುಟ ಹಿಡಿಯಲು ಯಾರೂ ಇಲ್ಲದೇ ಬೇರೆ ರಾಜ್ಯಗಳಿಂದ ಜನರನ್ನು ಕರೆತರುತ್ತಿದ್ದಾರೆ. ನನ್ನ ವಿರುದ್ಧ ಕಾಂಗ್ರೆಸ್ 90ಕ್ಕೂ ಹೆಚ್ಚು ಬಾರಿ ನಿಂದನೆ ಮಾಡಿದೆ. ಆ ಪಕ್ಷವು ಒಬಿಸಿಗಳು ಮತ್ತು ಲಿಂಗಾಯತರಂತಹ ವಿವಿಧ ಸಮುದಾಯಗಳನ್ನು ಅವಮಾನಿಸಿದೆ. ಎಸ್ ನಿಜಲಿಂಗಪ್ಪ ಅವರಂತಹ ಗೌರವಾನ್ವಿತ ನಾಯಕರನ್ನೂ ಕೂಡ ಅವಮಾನಿಸುತ್ತದೆ ಎಂದು ಹೇಳಿದರು.

ದೇಶದ ಮೂಲೆ ಮೂಲೆಯಿಂದ ಜನರು ಕಾಂಗ್ರೆಸ್ ಅನ್ನು ದೂರ ಮಾಡಿದ್ದಾರೆ. ಕರ್ನಾಟಕದಲ್ಲೂ ಅದೇ ರೀತಿ ಆಗಬೇಕು. “ಬಿಜೆಪಿಯಿಂದ ಮಾತ್ರ ಭಾರತವನ್ನು ಅಭಿವೃದ್ಧಿಯ ವೇಗದ ಹಾದಿಯಲ್ಲಿ ಕೊಂಡೊಯ್ಯುವುದು ಸಾಧ್ಯ.  ದೇಶವು 100ನೇ ಸ್ವಾತಂತ್ರ್ಯದ ವರ್ಷಕ್ಕೆ ಕಾಲಿಟ್ಟಾಗ ನಾವು ಸಂಪೂರ್ಣ ಅಭಿವೃದ್ಧಿ ಹೊಂದಿದ ಭಾರತವನ್ನು ನೋಡಲು ಬಯಸುತ್ತೇವೆಯ ಪ್ರತಿಯೊಬ್ಬ ವ್ಯಕ್ತಿಯೂ ಹೊರಬಂದು ಮೇ 10 ರಂದು ಬಿಜೆಪಿಗೆ ಮತ ಚಲಾಯಿಸಿ ಮತ್ತು ಬಹುಮತವನ್ನು ಖಾತ್ರಿಪಡಿಸಿದರೆ ಅದು ಸಾಧ್ಯವಾಗುತ್ತದೆ. ಕಾಂಗ್ರೆಸ್‌ನ ಭರವಸೆಗಳು ಮತ್ತು ಯೋಜನೆಗಳ ಬಗ್ಗೆ ಜಾಗರೂಕರಾಗಿರಿ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT