ವೀರಪ್ಪ ಮೊಯ್ಲಿ 
ರಾಜ್ಯ

ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ: ವೀರಪ್ಪ ಮೊಯ್ಲಿ

ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪಿಸಿರುವ ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಸಂಘಪರಿವಾರದಿಂದ ತೀವ್ರ ಪ್ರತಿಭಟನೆಯ ನಡುವೆ, ಕಾಂಗ್ರೆಸ್ ಹಿರಿಯ ನಾಯಕ ಮತ್ತು  ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾಪವನ್ನು ಮಾಡಿಲ್ಲ ಎಂದು ಹೇಳಿದ್ದಾರೆ. 

ಉಡುಪಿ: ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪಿಸಿರುವ ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಸಂಘಪರಿವಾರದಿಂದ ತೀವ್ರ ಪ್ರತಿಭಟನೆಯ ನಡುವೆ, ಕಾಂಗ್ರೆಸ್ ಹಿರಿಯ ನಾಯಕ ಮತ್ತು  ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಯಾವುದೇ ಪ್ರಸ್ತಾಪವನ್ನು ಮಾಡಿಲ್ಲ ಎಂದು ಹೇಳಿದ್ದಾರೆ. 
          
ಉಡುಪಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ವಿರುದ್ಧ ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಅವಲೋಕನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳದಂತಹ ಸಂಘಟನೆಗಳ ವಿರುದ್ಧ ಕ್ರಮವನ್ನು ಉಲ್ಲೇಖಿಸಲಾಗಿದೆ. ಇಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಈಗ ಆರಾಧಿಸುತ್ತಿರುವ ಬಿಜೆಪಿ, ಪಟೇಲ್ ಒಂದು ಹಂತದಲ್ಲಿ ಆರ್‌ಎಸ್‌ಎಸ್ ನಿಷೇಧಿಸಿದ್ದರು ಎಂಬುದನ್ನು ಮರೆತಿದೆ. ತದನಂತರ ಜವಾಹರ್ ಲಾಲ್ ನೆಹರೂ ನಿಷೇಧ ನಿರ್ಧಾರವನ್ನು ರದ್ದುಗೊಳಿಸಿದರು."ದ್ವೇಷ ರಾಜಕಾರಣದ ಬಗ್ಗೆ ಸುಪ್ರೀಂ ಕೋರ್ಟ್‌ನ ನಿಲುವು ಸ್ಪಷ್ಟವಾಗಿದೆ. ಅದರ ಭಾಗವಾಗಿ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದೇವೆ. ಆದರೆ ಬಜರಂಗದಳವನ್ನು ನಿಷೇಧಿಸುವ ಉದ್ದೇಶ ನಮಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಸ್ಪಷ್ಟಪಡಿಸಿದ್ದಾರೆ ಎಂದು ಮೊಯ್ಲಿ ತಿಳಿಸಿದರು.

ಇದೇ ವೇಳೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ವಕ್ತಾರ ಗೌರವ್ ವಲ್ಲಭ್, ಪ್ರಧಾನಿ ನರೇಂದ್ರ ಮೋದಿ ಅವರು ಹನುಮಂತ ದೇವರನ್ನು ಬಜರಂಗದಳಕ್ಕೆ ಹೋಲಿಸುವ ಮೂಲಕ ಹನುಮಂತನ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.         
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!