ನರೇಂದ್ರ ಮೋದಿ 
ರಾಜ್ಯ

ಪಾಕಿಸ್ತಾನ ಸೇರಿದಂತೆ ವಿದೇಶಗಳಿಂದ ಮೋದಿಗೆ ಶ್ಲಾಘನೆ: ನಮ್ಮವರಿಂದಲೇ ನಮ್ಮ ಪ್ರಧಾನಿಗೆ ಅವಮಾನ!

ಒಂದು ಕಡೆ ನಮ್ಮ ಸಾಂಪ್ರದಾಯಿಕ ಶತ್ರು ಪಾಕಿಸ್ತಾನ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಿವೆ.

ಸಿಂಧನೂರು: ಒಂದು ಕಡೆ ನಮ್ಮ ಸಾಂಪ್ರದಾಯಿಕ ಶತ್ರು ಪಾಕಿಸ್ತಾನ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಿವೆ. ಆದರೆ ನಮ್ಮ ದೇಶದ ಕೆಲವು ನಾಯಕರು ನಮ್ಮ ಪ್ರಧಾನಿಯನ್ನು ಅವಮಾನಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ  ಹೇಳಿದರು.

ಸಿಂಧನೂರಿನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿಗೆ ಸ್ವಾಗತ ಕೋರಿದ ಈಶ್ವರಪ್ಪ, ಕೆಲವು ಪಾಕಿಸ್ತಾನಿ ನಾಯಕರು ತಮ್ಮ ದೇಶದಲ್ಲಿ ಮೋದಿ ಶೈಲಿಯ ನಾಯಕತ್ವಕ್ಕಾಗಿ ಬಹಿರಂಗ ಬೇಡಿಕೆ ಇಟ್ಟಿದ್ದಾರೆ, ಆದರೆ ನಮ್ಮಲ್ಲಿ ಮೋದಿ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಮತಾಂತರ ತಡೆ ಕಾಯ್ದೆ, ಗೋಹತ್ಯೆ ತಡೆ ಕಾಯ್ದೆ ತಂದಿದೆ. ಆದರೆ ಈಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಈ ಕಾಯ್ದೆಗಳನ್ನು ಹಿಂಪಡೆದು ಬಜರಂಗದಳದ ಮೇಲೆ ನಿಷೇಧ ಹೇರುವುದಾಗಿ ಹೇಳುತ್ತಿದೆ . ಮತಾಂತರ ತಡೆ ಕಾಯ್ದೆ ಮತ್ತು ಗೋಹತ್ಯೆ ತಡೆ ಕಾಯ್ದೆಯನ್ನು ಹಿಂಪಡೆಯುವ ಸರ್ಕಾರ ನಿಮಗೆ ಬೇಕೇ ಎಂದು ಅವರು ಜನರನ್ನು ಕೇಳಿದರು.

ತಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಗೊತ್ತಿದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಈಶ್ವರಪ್ಪ ಲೇವಡಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT