ಮಂಗಮ್ಮ 
ರಾಜ್ಯ

ಕರ್ನಾಟಕ ಚುನಾವಣೆ: ರಾಯಚೂರಿನಲ್ಲಿ ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಅಸುನೀಗಿದ 82 ವರ್ಷದ ವೃದ್ಧೆ!

ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. 

ರಾಯಚೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. 

ಮೃತ ವೃದ್ಧೆ ಅಲಬನೂರು ಗ್ರಾಮದ 82 ವರ್ಷದ ಮಂಗಮ್ಮ ಎಂದು ತಿಳಿದುಬಂದಿದೆ. ಮಂಗಮ್ಮ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. 

ಈ ಬಾರಿ ಚುನಾವಣಾ ಆಯೋಗ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಟ್ಟಿತ್ತು. ಅದರಂತೆ ನಿನ್ನೆ ಮಂಗಮ್ಮ ಅವರ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿದ್ದರು. ಮಂಗಮ್ಮ ಅವರ ಮನೆಗೆ ಪಿಆರ್​ಒ ದಿನೇಶ ಕೆಪಿ ಹಾಗೂ ಎಪಿಆರ್​​ಒ ಬಸಪ್ಪ ಹೆಚ್ ಹಾಗೂ ಇತರ ಸಿಬ್ಬಂದಿ ತೆರಳಿದ್ದರು.

349 ಸಂಖ್ಯೆಯ ಮತಪತ್ರವನ್ನು ಮಂಗಮ್ಮ ಅವರಿಗೆ ನೀಡಲಾಗಿತ್ತು. ಮಧ್ಯಾಹ್ನ ಸುಮಾರು 12.19ರ ವೇಳೆಗೆ ಮಂಗಮ್ಮ ಮತದಾನ ಮಾಡಿದ್ದು ನಂತರ ಮಧ್ಯಾಹ್ನ 12.50ಕ್ಕೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!