ಶೋಭಾ ಕರಂದ್ಲಾಜೆ 
ರಾಜ್ಯ

ನಾಗರಿಕರ ಅನುಕೂಲಕ್ಕಾಗಿ 2 ದಿನ ರೋಡ್'ಶೋ ನಡೆಸಲು ನಿರ್ಧರ: ಬಿಜೆಪಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.6 ಮತ್ತು 7 ರಂದು ಎರಡು ದಿನಗಳ ಕಾಲ ರಾಜ್ಯ ರಾಜಧಾನಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಬೆಂಗಳೂರು, ನಮ್ಮ ಹೆಮ್ಮೆ ಹೆಸರಿನಲ್ಲಿ ಎರಡು ದಿನಗಳ ಕಾಲ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.6 ಮತ್ತು 7 ರಂದು ಎರಡು ದಿನಗಳ ಕಾಲ ರಾಜ್ಯ ರಾಜಧಾನಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಬೆಂಗಳೂರು, ನಮ್ಮ ಹೆಮ್ಮೆ ಹೆಸರಿನಲ್ಲಿ ಎರಡು ದಿನಗಳ ಕಾಲ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ಬಳಿಕ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಧಾನಿ ಮೋದಿಯವರ ರೋಡ್ ಶೋ ಕುರಿತು ಮಾಹಿತಿ ನೀಡಿದರು.

ಶನಿವಾರ ಇಡೀ ದಿನ ರೋಡ್‌ಶೋ ನಡೆಸಿದರೆ ಜನರು ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಹೀಗಾಗಿ ಅನಾನುಕೂಲ ತಪ್ಪಿಸಲು ಎರಡು ದಿನಗಳ ಕಾಲ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಒಂದೇ ದಿನ ರೋಡ್ ಶೋ ನಡೆಸಿದರೆ ಜನರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಿಗಾಗಿ ಈ ಅನಾನುಕೂಲತೆ ತಪ್ಪಿಸುವಂತೆ ಪ್ರಧಾನಮಂತ್ರಿಗಳ ವೇಳಾಪಟ್ಟಿಯನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ಘಟಕಕ್ಕೆ ಪ್ರಧಾನಮಂತ್ರಿಗಳ ಕಾರ್ಯಾಲಯ ಸೂಚಿಸಿತ್ತು.

ಭಾನುವಾರ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ರೋಡ್ ಶೋದಿಂದಾಗಿ ಅನಾನುಕೂಲತೆ ಎದುರಿಸಬೇಕಾಗುತ್ತದೆ. ಹೀಗಾಗಿ ಪರೀಕ್ಷೆಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.

ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

“ನಾಗರಿಕರ ಅನುಕೂಲಕ್ಕಾಗಿ ಎರಡು ದಿನಗಳ ಕಾಲ ರೋಡ್‌ಶೋ ನಡೆಸಲು ನಿರ್ಧರಿಸಲಾಗಿದೆ. ರೋಡ್ ಶೋ ಕುರಿತು ಬೆಂಗಳೂರಿಗರು ತಮ್ಮ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದರು. ಇದು ಚುನಾವಣಾ ಸಮಯವಾಗಿದ್ದು, ಸಮಸ್ಯೆಗಳು ಎದುರಾಗುವುದು ನಮಗಿಷ್ಟವಿಲ್ಲ. ಮೋದಿಯವರೂ ಕೂಡ ಜನರಿಗೆ ಸಮಸ್ಯೆಯಾಗದಂತೆ ಸೂಚಿಸಿದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT