ಐಟಿ ದಾಳಿ ವೇಳೆ ಪತ್ತೆಯಾದ ಹಣ 
ರಾಜ್ಯ

ಅಭ್ಯರ್ಥಿಗಳಿಗೆ ಹಣ ರವಾನೆ ಆರೋಪ; ಬೆಂಗಳೂರು, ಮೈಸೂರಿನಲ್ಲಿ ಮತ್ತೆ ಐಟಿ ದಾಳಿ, 15 ಕೋಟಿ ರೂ. ಗೂ ಅಧಿಕ ನಗದು ವಶ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಹಣ ರವಾನೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಐಟಿ ಅಧಿಕಾರಿಗಳು ಹಲವು ಫೈನಾನ್ಶಿಯರ್ ಗಳ ಮನೆ ಮತ್ತು ಕಚೇರಿಗಳ ದಾಳಿ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಹಣ ರವಾನೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಐಟಿ ಅಧಿಕಾರಿಗಳು ಹಲವು ಫೈನಾನ್ಶಿಯರ್ ಗಳ ಮನೆ ಮತ್ತು ಕಚೇರಿಗಳ ದಾಳಿ ಮಾಡಿದ್ದಾರೆ.

ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದ್ದು, ಸುಮಾರು 15 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆಯಲಾಗಿದೆ. ಫೈನಾನ್ಸಿಯರ್ ಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ್ದು, ಇವರು ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳಿಗೆ ಹಣಕಾಸು ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಫಂಡ್​ ಒದಗಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ದಾಳಿ ನಡೆಸಿದ್ದಾರೆ.

ಕೆಲವು ಫೈನಾನ್ಸಿಯರ್ ಗಳು ಬೇನಾಮಿಗಳಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ‌ ಹಿನ್ನೆಲೆ ನಿನ್ನೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಸುಮಾರು 15 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆಯಲಾಗಿದೆ. 15 ಕೋಟಿಗೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ದಾಖಲೆಗಳು ಸಹ ಪತ್ತೆಯಾಗಿವೆ.

ಎಲ್ಲೆಲ್ಲಿ ದಾಳಿ
ಬೆಂಗಳೂರಿನ ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ,  RMV ಬಡಾವಣೆ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್, ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ನಿನ್ನೆ ಮುಂಜಾನೆಯೇ ದಾಳಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿದ್ದು, ಅಕ್ರಮಗಳನ್ನು ತಡೆಯುವುದಕ್ಕಾಗಿ ಚುನಾವಣಾ ಆಯೋಗ ಹದ್ದಿನಕಣ್ಣಿಟ್ಟಿದೆ. ಈ ಮಧ್ಯೆ, ಆದಾಯ ತೆರಿಗೆ ಇಲಾಖೆಯೂ ಹಣಕಾಸು ವಹಿವಾಟುಗಳ ಮೇಲೆ ಸೂಕ್ಷ್ಮ ನಿಗಾ ಇರಿಸಿದೆ. ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸೋದರನ ಮನೆಯಲ್ಲಿ ಒಂದು ಕೋಟಿ ನಗದು ಹಣ ಸಿಕ್ಕಿತ್ತು. ಕೆಲವೇ ದಿನಗಳ ಹಿಂದೆ ಮೈಸೂರಿನಲ್ಲಿ ದಾಳಿ ಮಾಡಿದ್ದ ಐಟಿ ಅಧಿಕಾರಿಗಳಿಗೆ ಮನೆಯಂಗಳದಲ್ಲಿದ್ದ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಬಚ್ಚಿಟ್ಟಿದ್ದ ಕಂತೆ ಕಂತೆ ಹಣ ಪತ್ತೆಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT