ನಗರದಲ್ಲಿ ರೋಡ್ ಶೋ ನಡೆಸುತ್ತಿರುವ ಪ್ರಧಾನಿ ಮೋದಿ. 
ರಾಜ್ಯ

ಬಿಜೆಪಿ ರೋಡ್'ಶೋ: ಸಂಚಾರ ಅಸ್ತವ್ಯಸ್ತ, ಪ್ರಧಾನಿ ಮೋದಿಯನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದ ಕಾಂಗ್ರೆಸ್

ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದು, ರೋಡ್ ಶೋ ಪರಿಣಾಮ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದಿದೆ.

ನವದೆಹಲಿ: ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದು, ರೋಡ್ ಶೋ ಪರಿಣಾಮ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ನಿಂದಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.

ಮೋದಿಯವರು ಅವರು ತಮ್ಮ ರ್ಯಾಲಿಯಲ್ಲಿ ಪೂರ್ವಾಗ್ರಹ ಮತ್ತು ಮತಾಂಧತೆಯನ್ನು ಮಾತ್ರ ಪ್ರಚೋದಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಿಯವರ ರೋಡ್ ಶೋ ಇಡೀ ನಗರವನ್ನು ನಿರ್ಬಂಧಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಿಶ್ಚಿತತೆಯನ್ನು ಉಂಟುಮಾಡಿದೆ. ಇದು ಪ್ರಧಾನಿ ಎಷ್ಟು ಹತಾಶರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. ಹೀಗಾಗಿಯೇ ಅವರು 2 ದಿನದಲ್ಲಿ ರೋಡ್ ಶೋ ನಡೆಸಿ ಇಡೀ ನಗರವನ್ನು ಲಾಕ್ ಮಾಡುತ್ತಿದ್ದಾರೆ. ರೋಡ್ ಶೋ ಗಾಗಿ ಹಲವಾರು ಮರಗಳನ್ನು ಕಡಿಯಲಾಗುತ್ತಿದೆ. ಇಂತಹ ಹತಾಶ ಪ್ರಧಾನಿಯನ್ನು ಎಂದಾದಾರೂ ನೋಡಿದ್ದೀರಾ ಎಂದು ಕೇಳಿದ್ದಾರೆ.

ಮೋದಿಯವರು "ದಿ ಮಾಸ್ಟರ್ ಆಫ್ ಡಿಸ್ಟೋರ್ಶನ್. ರೋಡ್ ಶೋ ವೇಳೆ ಅವರು ಏನು ಹೇಳುತ್ತಾರೆಂಬುದು ನಮಗೆ ಈಗಾಗಲೇ ತಿಳಿದಿದೆ. ಅವರು ಪೂರ್ವಾಗ್ರಹ ಹಾಗೂ ಧರ್ಮಾಂಧತೆಯನ್ನು ಪ್ರಚೋದಿಸುತ್ತಾರೆಂದು ತಿಳಿಸಿದ್ದಾರೆ.

ಶೇ.40 ಕಮಿಷನ್ ಸರ್ಕಾರ, ಬೆಲೆ, ಹೆಚ್ಚುತ್ತಿರುವ ನಿರುದ್ಯೋಗ, ರಸ್ತೆಗಳ ಅಗೆತ ಈ ನೈಜ ವಿಚಾರಗಳ ಬಗ್ಗೆ ಅವರು ಮೌನ ತಾಳುತ್ತಾರೆಂಬುದು ನಮಗೆ ಗೊತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT