ನಗರದಲ್ಲಿ ರೋಡ್ ಶೋ ನಡೆಸುತ್ತಿರುವ ಪ್ರಧಾನಿ ಮೋದಿ. 
ರಾಜ್ಯ

ಬಿಜೆಪಿ ರೋಡ್'ಶೋ: ಸಂಚಾರ ಅಸ್ತವ್ಯಸ್ತ, ಪ್ರಧಾನಿ ಮೋದಿಯನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದ ಕಾಂಗ್ರೆಸ್

ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದು, ರೋಡ್ ಶೋ ಪರಿಣಾಮ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ಜರಿದಿದೆ.

ನವದೆಹಲಿ: ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದು, ರೋಡ್ ಶೋ ಪರಿಣಾಮ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರನ್ನು 'ಮಾಸ್ಟರ್ ಆಫ್ ಡಿಸ್ಟಾರ್ಶನ್' ಎಂದು ನಿಂದಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.

ಮೋದಿಯವರು ಅವರು ತಮ್ಮ ರ್ಯಾಲಿಯಲ್ಲಿ ಪೂರ್ವಾಗ್ರಹ ಮತ್ತು ಮತಾಂಧತೆಯನ್ನು ಮಾತ್ರ ಪ್ರಚೋದಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಿಯವರ ರೋಡ್ ಶೋ ಇಡೀ ನಗರವನ್ನು ನಿರ್ಬಂಧಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಿಶ್ಚಿತತೆಯನ್ನು ಉಂಟುಮಾಡಿದೆ. ಇದು ಪ್ರಧಾನಿ ಎಷ್ಟು ಹತಾಶರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ. ಹೀಗಾಗಿಯೇ ಅವರು 2 ದಿನದಲ್ಲಿ ರೋಡ್ ಶೋ ನಡೆಸಿ ಇಡೀ ನಗರವನ್ನು ಲಾಕ್ ಮಾಡುತ್ತಿದ್ದಾರೆ. ರೋಡ್ ಶೋ ಗಾಗಿ ಹಲವಾರು ಮರಗಳನ್ನು ಕಡಿಯಲಾಗುತ್ತಿದೆ. ಇಂತಹ ಹತಾಶ ಪ್ರಧಾನಿಯನ್ನು ಎಂದಾದಾರೂ ನೋಡಿದ್ದೀರಾ ಎಂದು ಕೇಳಿದ್ದಾರೆ.

ಮೋದಿಯವರು "ದಿ ಮಾಸ್ಟರ್ ಆಫ್ ಡಿಸ್ಟೋರ್ಶನ್. ರೋಡ್ ಶೋ ವೇಳೆ ಅವರು ಏನು ಹೇಳುತ್ತಾರೆಂಬುದು ನಮಗೆ ಈಗಾಗಲೇ ತಿಳಿದಿದೆ. ಅವರು ಪೂರ್ವಾಗ್ರಹ ಹಾಗೂ ಧರ್ಮಾಂಧತೆಯನ್ನು ಪ್ರಚೋದಿಸುತ್ತಾರೆಂದು ತಿಳಿಸಿದ್ದಾರೆ.

ಶೇ.40 ಕಮಿಷನ್ ಸರ್ಕಾರ, ಬೆಲೆ, ಹೆಚ್ಚುತ್ತಿರುವ ನಿರುದ್ಯೋಗ, ರಸ್ತೆಗಳ ಅಗೆತ ಈ ನೈಜ ವಿಚಾರಗಳ ಬಗ್ಗೆ ಅವರು ಮೌನ ತಾಳುತ್ತಾರೆಂಬುದು ನಮಗೆ ಗೊತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT