ಬಲರಾಮ ಆನೆ 
ರಾಜ್ಯ

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಅಸುನೀಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ ಆನೆ ಅಸುನೀಗಿದೆ.

67 ವರ್ಷದ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ.

ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು‌ ಕುಡಿಯಲು ಆಗದೇ ತೀವ್ರ ಅಸ್ವಸ್ಥಗೊಂಡಿತ್ತು. ಬಲರಾಮನಿಗೆ ಕ್ಷಯ ಇರಬಹುದೆಂದು ವೈದ್ಯರು ಶಂಕಿಸಿದ್ದರು. ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್