ಹಕ್ಕಿ-ಪಿಕ್ಕಿ ಜನರೊಂದಿಗೆ ಮೋದಿ ಸಂವಾದ 
ರಾಜ್ಯ

ಸೂಡನ್ ನಿಂದ ಬಂದ ಹಕ್ಕಿ-ಪಿಕ್ಕಿ ಸಮುದಾಯದ ಜನರೊಂದಿಗೆ ಮೋದಿ ಸಂವಾದ; ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಕಾವೇರಿ ಮೂಲಕ ಸುಡಾನ್‌ನಿಂದ ಕರೆತರಲಾದ ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಸಂವಾದ ನಡೆಸಿದ್ದಾರೆ.

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು 'ಆಪರೇಷನ್ ಕಾವೇರಿ' ಮೂಲಕ ಸುಡಾನ್‌ನಿಂದ ಕರೆತರಲಾದ ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಸಂವಾದ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸುಡಾನ್ ನಲ್ಲಿ  ತಮ್ಮ ಸಮಯೋಚಿತ ಹಾಗೂ ಸುರಕ್ಷಿತ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಥಳಾಂತರಿಸಲ್ಪಟ್ಟವರು ಕೃತಜ್ಞತೆ ಸಲ್ಲಿಸಿದರು. ಅಲ್ಲದೇ ಸುಡಾನ್‌ನಲ್ಲಿ ಎದುರಿಸಿದ ಕಠಿಣ ಸಂದರ್ಭಗಳು  ಮತ್ತು ತಮ್ಮ ಸುರಕ್ಷತೆ ಖಾತ್ರಿಗೆ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿ ಹೇಗೆ ಸ್ಪಂದಿಸಿದವು ಎಂಬುದನ್ನು ವಿವರಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು. 

16ನೇ ಶತಮಾನದ ದೊರೆ ಮಹಾರಾಣಾ ಪ್ರತಾಪ್ ಜೊತೆಗೆ ತಮ್ಮ ಪೂರ್ವಜರು ಹೇಗೆ ನಿಂತಿದ್ದರು ಎಂಬುದನ್ನು ಬುಡಕಟ್ಟು ಜನರಿಗೆ ನೆನಪಿಸಿಕೊಂಡ ಪ್ರಧಾನಿ, ಇಡೀ ಜಗತ್ತಿನಲ್ಲಿ ಯಾವುದೇ ಭಾರತೀಯರು ಯಾವುದೇ ರೀತಿಯ ತೊಂದರೆಯಲ್ಲಿದ್ದರೆ, ಸಮಸ್ಯೆ ಬಗೆಹರಿಯುವವರೆಗೂ ಸರ್ಕಾರ ವಿರಮಿಸುವುದಿಲ್ಲ ಎಂದು ಒತ್ತಿ ಹೇಳಿದರು.

ಕೆಲವು ರಾಜಕಾರಣಿಗಳು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸಿದರು. ಅಲ್ಲದೇ ಭಾರತೀಯರು ಏಲ್ಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರೆ, ಹೆಚ್ಚಿನ ಅಪಾಯವನ್ನು ಎದುರಿಸಬಹುದು ಎಂಬುದು ನಮ್ಮ ಕಳವಳವಾಗಿತ್ತು. ಆದ್ದರಿಂದ ಸರ್ಕಾರವು ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸದ್ದಿಲ್ಲದೆ ಕೆಲಸ ಮಾಡಿದೆ ಎಂದು ಮೋದಿ ಉಲ್ಲೇಖಿಸಿದ್ದಾರೆ.

ಹಕ್ಕಿಪಿಕ್ಕಿ ಜನರು ತಮ್ಮ ಪರವಾಗಿ ನಿಂತ ದೇಶದ ಬಲವನ್ನು ಸ್ಮರಿಸಬೇಕೆಂದು ಕೋರಿದ ಪ್ರಧಾನಿ, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಮತ್ತು ಸಮಾಜ ಮತ್ತು ದೇಶಕ್ಕೆ ಕೊಡುಗೆ ನೀಡಲು ಸದಾ ಸಿದ್ಧರಾಗಿರಬೇಕು ಎಂದು ಹೇಳಿದರು. ವಿದೇಶದಲ್ಲಿರುವ ಜನರು ಭಾರತೀಯ ಔಷಧಿಗಳ ಮೇಲೆ ಹೇಗೆ ನಂಬಿಕೆ ಇಟ್ಟಿದ್ದಾರೆ ಮತ್ತು ನಾವು ಭಾರತೀಯರು ಎಂದು ಹೇಳಿದ ಮೇಲೆ ಅವರು ಹೇಗೆ ಸಂತೋಷಪಟ್ಟರು ಎಂಬುದನ್ನು ಸ್ಥಳಾಂತರಿಸಲ್ಪಟ್ಟ ಜನರು ಪ್ರಧಾನಿಗೆ ತಿಳಿಸಿದರು ಎಂದು ಅಧಿಕಾರಿ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT