ದರ್ಶನ್ ಮತ್ತು ಸತೀಶ್ ರೆಡ್ಡಿ 
ರಾಜ್ಯ

ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ನಟ ದರ್ಶನ್ ಪ್ರಚಾರ: ಸತೀಶ್ ರೆಡ್ಡಿ ಪರ 'ಸಾರಥಿ' ಮತಯಾಚನೆ

ಬೊಮ್ಮನಹಳ್ಳಿಯಿಂದ ನಾಲ್ಕನೇ ಅವಧಿಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ನಟ ದರ್ಶನ್ ಪ್ರಚಾರ ನಡೆಸಿದರು.

ಬೆಂಗಳೂರು: ಬೊಮ್ಮನಹಳ್ಳಿಯಿಂದ ನಾಲ್ಕನೇ ಅವಧಿಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ನಟ ದರ್ಶನ್ ಪ್ರಚಾರ ನಡೆಸಿದರು.

ಕಾಂಗ್ರೆಸ್‌ನಿಂದ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಸ್ಪರ್ಧಿಸಿದ್ದಾರೆ. ಉಮಾಪತಿ ಗೌಡ ನಿರ್ಮಾಣದ ಚಿತ್ರವೊಂದರಲ್ಲಿ ದರ್ಶನ್ ನಟಿಸಿದ್ದರು.  ಸದ್ಯ ಉಮಾಪತಿ ಶ್ರೀನಿವಾಸಗೌಡರ ವಿರುದ್ಧ ಸತೀಶ್ ರೆಡ್ಡಿ ಪರ ದರ್ಶನ್ ಮತಯಾಚನೆ ಮಾಡುತ್ತಿದ್ದಾರೆ.

ಚುನಾವಣೆಯಲ್ಲಿ ರೆಡ್ಡಿ ಅವರನ್ನು ಆಯ್ಕೆ ಮಾಡುವಂತೆ ದರ್ಶನ್ ಮತದಾರರಲ್ಲಿ ಮನವಿ ಮಾಡಿದರು. ಭಾನುವಾರ, ದೇವರಚಿಕ್ಕನಗಲ್ಲಿ, ಹೊಂಗಸಂದ್ರ, ಬೊಮ್ಮನಹಳ್ಳಿ, ರೂಪೇನಗ್ರಹಾರ, ಮಂಗಮನಪಾಳ್ಯ ಸೇರಿದಂತೆ ಹಲವೆಡೆ ಪ್ರಚಾರ ನಡೆಸಿದರು. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು.

ಬಿಜೆಪಿ ಬೆಂಬಲಿಗರು ಮತ್ತು ದರ್ಶನ್ ಅವರ ಅಭಿಮಾನಿಗಳು ಭಾರೀ ಮಟ್ಟದಲ್ಲಿ ಸೇರಿದ್ದರು, ಇದು ಮತದಾನದ ದಿನದಂದು ನನಗೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಸತೀಶ್ ರೆಡ್ಡಿ ಹೇಳಿದರು.

ದರ್ಶನ್ 9: 30 ರ ಸುಮಾರಿಗೆ ಪ್ರಚಾರ ವಾಹನವನ್ನು ಹತ್ತಿದರು ಮತ್ತು ಸಂಜೆಯವರೆಗೂ ಅವರು ಬಿಜೆಪಿ ಅಭ್ಯರ್ಥಿಯ ಜೊತೆಗೂಡಿ ಹಲವು ಸ್ಥಳಗಳಲ್ಲಿ ಮತಯಾಚಿಸಿದರು.

ಕಳೆದ ಎರಡು ಚುನಾವಣೆಗಳಲ್ಲಿ ಸತೀಶ್ ರೆಡ್ಡಿ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ, ಆದರೆ ಈ ಬಾರಿ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಅವರನ್ನು ಕಣಕ್ಕಿಳಿಸಿದ್ದಾರೆ.

ನಾಲ್ಕು ಲಕ್ಷ ಮತದಾರರಿರುವ ಬೊಮ್ಮನಹಳ್ಳಿಯಲ್ಲೇ ಸುಮಾರು 1.3 ಲಕ್ಷ  ಒಕ್ಕಲಿಗ ಮತದಾರರಿದ್ದು, ಒಕ್ಕಲಿಗ ಮತಗಳನ್ನು ದಕ್ಕಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.  ಹೀಗಾಗಿ ಎಲ್ಲಾ ವರ್ಗದ ಬೆಂಬಲ ಪಡೆಯಲು ಬಿಜೆಪಿ ಅಭ್ಯರ್ಥಿಗಳು ಎಲ್ಲ ಹರ ಸಾಹಸ ಪಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT