ಬೆಂಗಳೂರಿನಲ್ಲಿ ನಡೆದ ರೋಡ್‌ಶೋನಲ್ಲಿ ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ವೇಳೆ ಬಸ್ ನಿಲ್ದಾಣ ಬಂದ್: ದೂರು ದಾಖಲಿಸಿದ ಬಿಬಿಪಿವಿ

ಬೆಂಗಳೂರಿನಲ್ಲಿ ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋ ವೇಳೆ ಜಯನಗರ ಬಸ್ ಟರ್ಮಿನಲ್ ಬಂದ್ ಮಾಡಿದ್ದರಿಂದ ನೂರಾರು ಪ್ರಯಾಣಿಕರಿಗೆ ತೊಂದರೆಯಾದ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ...

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋ ವೇಳೆ ಜಯನಗರ ಬಸ್ ಟರ್ಮಿನಲ್ ಬಂದ್ ಮಾಡಿದ್ದರಿಂದ ನೂರಾರು ಪ್ರಯಾಣಿಕರಿಗೆ ತೊಂದರೆಯಾದ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ಒಂದು ದಿನದ ನಂತರ, ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆ(BBPV) ಬೆಂಗಳೂರು ಸಂಚಾರ ಪೊಲೀಸರಿಗೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಗೆ ದೂರು ನೀಡಿದ್ದು, ಬಸ್ ನಿಲ್ದಾಣ ಬಂದ್ ಮಾಡಿರುವುದು ಕಾನೂನುಬಾಹಿರ ಎಂದು ಹೇಳಿದೆ.

ಬಸ್ ಪ್ರಯಾಣಿಕರ ಹಕ್ಕುಗಳ ವೇದಿಕೆ ಬಿಬಿಪಿವಿ ಮೇ 7 ರಂದು ಹೆಚ್ಚುವರಿ ಪೊಲೀಸ್ ಕಮಿಷನರ್(ಸಂಚಾರ) ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿದ್ದು, ಅದರಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಉಲ್ಲೇಖಿಸಿ, ದುಷ್ಕೃತ್ಯವನ್ನು ಎತ್ತಿ ತೋರಿಸಿದ್ದಾರೆ.

ಬಿಎಂಟಿಸಿಯಲ್ಲಿ ಪ್ರಯಾಣಿಸುವವರಲ್ಲಿ ಹೆಚ್ಚಾಗಿ ಕಾರ್ಮಿಕರಾಗಿರುತ್ತಾರೆ. ಶ್ರೀಮಂತ ಹಿನ್ನೆಲೆಯಿಂದ ಬಂದವರಲ್ಲ. ರೋಡ್‌ಶೋಗಾಗಿ ಬಸ್ ನಿಲ್ದಾಣ ಬಂದ್ ಮಾಡಿದ್ದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನಾನುಕೂಲತೆಯನ್ನುಂಟುಮಾಡಿದೆ ಮತ್ತು ಒಂದು ದಿನ ಅಥವಾ ಅರ್ಧ ದಿನದ ವೇತನ/ವ್ಯಾಪಾರ/ಸಂಬಳವನ್ನು ಅವರು ಕಳೆದುಕೊಂಡಿದ್ದಾರೆ. ಹೀಗಾಗಿ ಟರ್ಮಿನಲ್ ಬಂದ್ ಮಾಡಲು ಅನುಮತಿ ನೀಡಿದವರ ವಿರುದ್ಧ ತನಿಖೆ ನಡೆಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಬಿಪಿವಿ ಒತ್ತಾಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

SCROLL FOR NEXT