ರಾಜಕೀಯ ಜಾಹೀರಾತು. (ಫೋಟೋ | ಟ್ವಿಟರ್) 
ರಾಜ್ಯ

'ಭ್ರಷ್ಟಾಚಾರ ರೇಟ್ ಕಾರ್ಡ್'ಗೆ ನೊಟೀಸ್: ಚುನಾವಣಾ ಆಯೋಗದಿಂದ ಪಕ್ಷಪಾತ ಧೋರಣೆ ಎಂದು ಕಾಂಗ್ರೆಸ್ ಟೀಕೆ

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ 'ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡು' ಎಂದು ಕಾಂಗ್ರೆಸ್ ಜಾಹೀರಾತು ನೀಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ನೀಡಿರುವ ನೊಟೀಸ್ ಗೆ ಕೆಂಡಾಮಂಡಲವಾಗಿರುವ

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ 'ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡು' ಎಂದು ಕಾಂಗ್ರೆಸ್ ಜಾಹೀರಾತು ನೀಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ನೀಡಿರುವ ನೊಟೀಸ್ ಗೆ ಕೆಂಡಾಮಂಡಲವಾಗಿರುವ ಕೈ ಪಕ್ಷ ಆಯೋಗ ಪಕ್ಷಪಾತವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿದೆ. ಚುನಾವಣಾ ಆಯೋಗದ ಮಾನದಂಡಗಳು ಕೇವಲ ವಿರೋಧ ಪಕ್ಷಕ್ಕೆ ಮಾತ್ರ ಅನ್ವಯವಾಗುತ್ತದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ಚುನಾವಣಾ ಮಾರ್ಗಸೂಚಿಗಳನ್ನು ಹಲವು ಬಾರಿ ಉಲ್ಲಂಘನೆ ಮಾಡಿದ್ದು ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗದ ಗಮನಕ್ಕೆ ಹಲವು ಬಾರಿ ತಂದಿದ್ದರೂ, ಚುನಾವಣಾ ಆಯೋಗ ಒಂದು ನೊಟೀಸ್ ಜಾರಿ ಮಾಡುವುದಾಗಲಿ, ಖಂಡಿಸುವುದಾಗಲಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಚುನಾವಣಾ ಆಯೋಗ ಉತ್ತರ ನೀಡಲು ಒದಗಿಸಿರುವ 24 ಗಂಟೆಗಳ ಗಡುವು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರವು ಇಂದಿಗೆ ಮುಕ್ತಾಯಗೊಳ್ಳುತ್ತಿರುವುದರಿಂದ ಪ್ರತಿಕ್ರಿಯಿಸಲು ಸಾಕಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಮತ್ತು ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳುತ್ತಾರೆ.

ಭ್ರಷ್ಟಾಚಾರ ರೇಟ್ ಕಾರ್ಡು ಜಾಹೀರಾತನ್ನು ಪತ್ರಿಕೆಯಲ್ಲಿ ಪ್ರಕಟಿಸಿರುವ ಸಂಬಂಧ ಚುನಾವಣಾ ಆಯೋಗ ಕಳೆದ ಶನಿವಾರ ಕಾಂಗ್ರೆಸ್ ಗೆ ನೊಟೀಸ್ ಜಾರಿ ಮಾಡಿ ತನ್ನ ಆರೋಪಕ್ಕೆ ಪ್ರಾಯೋಗಿಕ ಸ್ಪಷ್ಟ ಪುರಾವೆಯನ್ನು ನಿನ್ನೆ ಭಾನುವಾರದೊಳಗೆ ಒದಗಿಸಬೇಕೆಂದು ಸೂಚಿಸಿತ್ತು.

ಬಿಜೆಪಿ ನೀಡಿದ್ದ ದೂರಿನ ಆಧಾರದ ಮೇಲೆ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ಜಾರಿ ಮಾಡಿತ್ತು. 2019 ಮತ್ತು 2023 ರ ನಡುವೆ ರಾಜ್ಯದಲ್ಲಿ "ಭ್ರಷ್ಟಾಚಾರ ದರಗಳು" ಪಟ್ಟಿ ಮಾಡುವ ಪೋಸ್ಟರ್ ಮತ್ತು ಜಾಹೀರಾತುಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿ ಬಿಜೆಪಿ ಸರ್ಕಾರವನ್ನು "ಟ್ರಬಲ್ ಇಂಜಿನ್" ಎಂದು ಬಣ್ಣಿಸಿದೆ.

"ಚುನಾವಣಾ ಆಯೋಗದ ಕ್ರಮಗಳು ಸಂವಿಧಾನದ 14 ಮತ್ತು 21 ನೇ ವಿಧಿಗಳ ಪ್ರಾಥಮಿಕ ಉಲ್ಲಂಘನೆಯಾಗಿದೆ, ಇದು ಆಡಳಿತಾತ್ಮಕ ಕ್ರಮದಲ್ಲಿ ಅನಿಯಂತ್ರಿತತೆಯ ವಿರುದ್ಧ ಮತ್ತು ಪಕ್ಷಪಾತ, ಅಧಿಕೃತ ದುರುದ್ದೇಶಪೂರಿತ ಕೃತ್ಯಗಳು, ಸಹಜ ನ್ಯಾಯದ ಉಲ್ಲಂಘನೆಗಳ ವಿರುದ್ಧ ಮೂಲಭೂತ ಖಾತರಿಯನ್ನು ಒದಗಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ. 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗದಿಂದ ಅನ್ಯಾಯ ಮತ್ತು ಅಸಮಾನ ವರ್ತನೆಗೆ ಒಳಗಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ. ಚುನಾವಣಾ ಆಯೋಗದ ಮಾನದಂಡಗಳು ವಿರೋಧ ಪಕ್ಷಗಳಿಗೆ ಮಾತ್ರ ಮೀಸಲಿಟ್ಟಂತೆ ತೋರುತ್ತಿದೆ ಎಂಬುದು ಕಾಂಗ್ರೆಸ್ ನ ಆಪಾದನೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

6 ನಾಗಾಗಳ ಹತ್ಯೆ ಬೆನ್ನಲ್ಲೇ ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರ ಬರ್ಬರ ಹತ್ಯೆ; 30 ಮನೆಗಳು ಸುಟ್ಟು ಕರಕಲು!

ಪ್ರಧಾನಿ ಮೋದಿ ಭೇಟಿ ಮಾಡಿದ ಡಿಕೆಶಿ; ರಾಜ್ಯದ ಅಭಿವೃದ್ಧಿಗೆ ಸಹಕಾರ ಕೋರಿದ ಸಿಎಂ

350 ರನ್ ಟಾರ್ಗೆಟ್ ಕೊಟ್ರೂ ಆಫ್ಘಾನ್ ವಿರುದ್ಧ 4 ರನ್‌ನಿಂದ ಸೋತ ಭಾರತ!

IPL 2026: RCB ಚಾಂಪಿಯನ್ ಆದ ಬಳಿಕ ವಿರಾಟ್ ಕೊಹ್ಲಿಯ ಹೊಸ ಹೇರ್ ಸ್ಟೈಲ್ ವೈರಲ್! Video

ಗಾಂಧೀಜಿ ತಂಗಿದ್ದ ಜಾಗದಲ್ಲಿ ಡಿಕೆಶಿ ದರ್ಪದ ಹೆಜ್ಜೆಗಳು! CM ನಿವಾಸವಾಗಿ 'ಕುಮಾರಕೃಪ' ಬದಲಾವಣೆ ಕುರಿತು JDS ಕೆಂಡ

SCROLL FOR NEXT