ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಚುನಾವಣೆ: ಮತದಾನಕ್ಕೆ ಕ್ಷಣಗಣನೆ, ಮುದ್ರಣ ಮಾಧ್ಯಮಗಳು ಜಾಹೀರಾತು ಪ್ರಕಟಿಸಬಾರದು- ಆಯೋಗ

ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ಮತದಾನಕ್ಕೆ ಮುನ್ನ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯ ಅನುಮತಿಯಿಲ್ಲದೆ ಚುನಾವಣಾ ದಿನದಂದು ಮತ್ತು ಒಂದು ದಿನದ ಮೊದಲು ಮುದ್ರಣ ಮಾಧ್ಯಮದಲ್ಲಿ ಯಾವುದೇ ಜಾಹೀರಾತು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ನವದೆಹಲಿ: ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ಮತದಾನಕ್ಕೆ ಮುನ್ನ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯ ಅನುಮತಿಯಿಲ್ಲದೆ ಚುನಾವಣಾ ದಿನದಂದು ಮತ್ತು ಒಂದು ದಿನದ ಮೊದಲು ಮುದ್ರಣ ಮಾಧ್ಯಮದಲ್ಲಿ ಯಾವುದೇ ಜಾಹೀರಾತು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಸೋಮವಾರ ಅಂದರೆ ಇಂದು ಅಂತ್ಯಗೊಳ್ಳಲಿದ್ದು, ರಾಜಕೀಯ ಪಕ್ಷಗಳಿಗೆ ನೀಡಿದ ಸಲಹೆಯಲ್ಲಿ, ಚುನಾವಣಾ ಪ್ರಾಧಿಕಾರವು "ಸ್ವಚ್ಛ ಮತ್ತು ಗಂಭೀರ" ಅಭಿಯಾನಕ್ಕೆ ಒತ್ತು ನೀಡಿದ್ದು, ಚುನಾವಣಾ ಪ್ರಚಾರವು ಅಂತಿಮ ಹಂತ ತಲುಪಿರುವಂತೆಯೇ ಮಹತ್ವದ ಆದೇಶ ನೀಡಿದೆ.

ಪತ್ರಿಕಾ ಸಂಸ್ಥೆಗಳಿಗೂ ಆಯೋಗ ಎಚ್ಚರಿಕೆ
ಇನ್ನು ಪತ್ರಿಕೋದ್ಯಮದ ನಡವಳಿಕೆಗಾಗಿ ಭಾರತೀಯ ಪತ್ರಿಕಾ ಮಂಡಳಿಯ ನಿಯಮಗಳು ತಮ್ಮ ಪತ್ರಿಕೆಗಳಲ್ಲಿ ಪ್ರಕಟವಾದ ಜಾಹೀರಾತುಗಳು ಸೇರಿದಂತೆ ಎಲ್ಲಾ ವಿಷಯಗಳಿಗೆ ಸಂಸ್ಛೆಗಳನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ ಎಂದು ಸಂಪಾದಕರಿಗೆ ಪ್ರತ್ಯೇಕ ಪತ್ರದಲ್ಲಿ ಚುನಾವಣಾ ಆಯೋಗವು (EC) ಸ್ಪಷ್ಟಪಡಿಸಿದೆ.

"ಜವಾಬ್ದಾರಿಯನ್ನು ನಿರಾಕರಿಸಿದರೆ, ಇದನ್ನು ಮೊದಲೇ ಸ್ಪಷ್ಟವಾಗಿ ಹೇಳಬೇಕು" ಎಂದು ಆಯೋಗವು ಕರ್ನಾಟಕದ ಪತ್ರಿಕೆಗಳ ಸಂಪಾದಕರಿಗೆ ಬರೆದ ಪತ್ರದಲ್ಲಿ ತಿಳಿಸಿದೆ. ರಾಜಕೀಯ ಪಕ್ಷಗಳಿಗೆ ನೀಡಿದ ಸಲಹೆಯು, ಪ್ರಚಾರ ರಹಿತ ಸಮಯದಲ್ಲಿ ಜಾಹೀರಾತುಗಳನ್ನು ಪ್ರಕಟಿಸಲು ಚುನಾವಣಾ ದಿನದಂದು ಮತ್ತು ಮತದಾನದ ದಿನದ ಒಂದು ದಿನದ ಮೊದಲು - ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ (MCMC) ಯಿಂದ ಪೂರ್ವ-ಪ್ರಮಾಣೀಕರಿಸಬೇಕು ಎಂದು ಹೇಳಿದೆ.

"ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಅಥವಾ ಯಾವುದೇ ಇತರ ಸಂಸ್ಥೆಗಳು ಅಥವಾ ವ್ಯಕ್ತಿಗಳು ಚುನಾವಣಾ ದಿನದಂದು ಮತ್ತು ಮತದಾನದ ದಿನಕ್ಕೆ ಒಂದು ದಿನದ ಮೊದಲು ಮುದ್ರಣ ಮಾಧ್ಯಮದಲ್ಲಿ ಯಾವುದೇ ಜಾಹೀರಾತುಗಳನ್ನು ಪ್ರಕಟಿಸಬಾರದು. ಅಂತೆಯೇ ರಾಜಕೀಯ ಜಾಹೀರಾತಿನ ವಿಷಯಗಳನ್ನು ಅವರು ರಾಜ್ಯದ MCMC ಯಿಂದ  ಜಿಲ್ಲಾ ಮಟ್ಟದಲ್ಲಿ ಸಂದರ್ಭಾನುಸಾರ ಪೂರ್ವ-ಪ್ರಮಾಣೀಕರಿಸದಿದ್ದರೆ ಅಂತಹ ಜಾಹಿರಾತುಗಳನ್ನು ಪ್ರಕಟಿಸಬಾರದು ಎಂದು ಸಲಹೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT