ಸಾಂದರ್ಭಿಕ ಚಿತ್ರ 
ರಾಜ್ಯ

ಕೊಡಗು: ಸುಗಮ ಮತದಾನಕ್ಕೆ ಸಂಪೂರ್ಣ ಸಿದ್ಧತೆ; ಜಿಲ್ಲಾಧಿಕಾರಿ ಮಾಹಿತಿ

ರಾಜ್ಯ ವಿಧಾನಸಭೆ ಚುನಾವಣೆಗಾಗಿ ಇದುವರೆಗೂ ಶೇ.96ಕ್ಕೂ ಹೆಚ್ಚು ಮತದಾರರ ಚೀಟಿಗಳನ್ನು ವಿತರಿಸಲಾಗಿದ್ದು, ಶೀಘ್ರದಲ್ಲಿಯೇ ಉಳಿದ ಮತದಾರರ ಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ.

ಮಡಿಕೇರಿ: ರಾಜ್ಯ ವಿಧಾನಸಭೆ ಚುನಾವಣೆಗಾಗಿ ಇದುವರೆಗೂ ಶೇ.96ಕ್ಕೂ ಹೆಚ್ಚು ಮತದಾರರ ಚೀಟಿಗಳನ್ನು ವಿತರಿಸಲಾಗಿದ್ದು, ಶೀಘ್ರದಲ್ಲಿಯೇ ಉಳಿದ ಮತದಾರರ ಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಮತದಾನ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು, ನಿರ್ಣಾಯಕ ಮತಗಟ್ಟೆಗಳಲ್ಲಿ 75 ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ತಲಾ ಐದು - ಜಿಲ್ಲೆಯಲ್ಲಿ ಒಟ್ಟು 10 ಸಖಿ ಮತಗಟ್ಟೆಗಳನ್ನು ರಚಿಸಲಾಗಿದೆ. ಒಟ್ಟು 12 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಮತ್ತು ದುರ್ಬಲ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ಈ ಮತಗಟ್ಟೆಗಳಲ್ಲಿ ಕೇಂದ್ರೀಯ ಪ್ಯಾರಾ ಮಿಲಿಟರಿ ಪಡೆಗಳನ್ನು (ಸಿಎಪಿಎಫ್) ನಿಯೋಜಿಸಲಾಗುವುದು. ಒಟ್ಟು ಒಂಬತ್ತು ವಲಯದಲ್ಲಿ ಮೊಬೈಲ್ ಸ್ಕ್ವಾಡ್‌ಗಳನ್ನು ನಿಯೋಜಿಸಲಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಅವರು ಒಂದು ಗಂಟೆಯೊಳಗೆ ಮತಗಟ್ಟೆಗಳನ್ನು ತಲುಪುತ್ತಾರೆ.

ಸುಗಮ ಮತದಾನಕ್ಕಾಗಿ ಪೊಲೀಸ್ ಅಧಿಕಾರಿಗಳ ಜೊತೆಗೆ ಜಿಲ್ಲೆಯಾದ್ಯಂತ ಒಟ್ಟು 70 ಸಿಎಪಿಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ರಾಮರಾಜನ್ ಕೆ  ತಿಳಿಸಿದರು. ತಮಿಳುನಾಡಿನಿಂದ ಗೃಹರಕ್ಷಕರೊಂದಿಗೆ ಸಿವಿಲ್ ಪೊಲೀಸ್, ಐಟಿಬಿಪಿ, ಸಿಐಎಸ್ಆರ್ ಮತ್ತು ಕೆಎಸ್ಆರ್ಪಿ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಒಟ್ಟು 543 ಮತಗಟ್ಟೆಗಳ ಪೈಕಿ 271 ಮತಗಟ್ಟೆಗಳು ವೆಬ್ ಕಾಸ್ಟಿಂಗ್ ಸೌಲಭ್ಯಗಳನ್ನು ಹೊಂದಿದ್ದು, ಉಳಿದವುಗಳನ್ನು ಮೈಕ್ರೋ ಅಬ್ಸರ್ವರ್‌ಗಳು ನಿರ್ವಹಿಸುತ್ತಾರೆ. ಚಾಲಕರು ಮತ್ತು ಇತರ ಸಾರಿಗೆ ನೌಕರರು ಅಂಚೆ ಮತಪತ್ರ ಸೌಲಭ್ಯದ ಮೂಲಕ ಮತ ಚಲಾಯಿಸಲು ವ್ಯವಸ್ಥೆ ಮಾಡಲಾಗಿದ್ದು, ಮೇ 13 ರವರೆಗೆ ಮತದಾನಕ್ಕೆ ಅವಕಾಶವಿದೆ ಎಂದು ಸತೀಶ ತಿಳಿಸಿದರು.

ಮಡಿಕೇರಿ ನಗರ ಪಾಲಿಕೆ ಆಡಳಿತ ನಡೆಸುವ ಹಿಂದೂಸ್ತಾನಿ ಶಾಲೆಯಲ್ಲಿ ಮಾದರಿ ಮತಗಟ್ಟೆ ಸ್ಥಾಪಿಸಲಾಗಿದೆ. ಕಾಫಿ ವಿಷಯದ ಮತಗಟ್ಟೆಗಳ ಜೊತೆಗೆ ಮಾದರಿ ಮತಗಟ್ಟೆಯಲ್ಲಿ ವಿಸ್ತೃತ ಸೌಲಭ್ಯಗಳನ್ನು ನೀಡಲಾಗುವುದು.

ಶಾಲಾ ಆವರಣದಲ್ಲಿ ಕಾಫಿ ಮಾರಾಟ ಯಂತ್ರವನ್ನು ಅಳವಡಿಸಲಾಗುವುದು ಮತ್ತು ಮತದಾರರು ಕನಿಷ್ಠ ಬೆಲೆಗೆ ಕಾಫಿ ಪಡೆಯಬಹುದು. ಈ ಮಾದರಿ ಮತಗಟ್ಟೆಯಲ್ಲಿ ಇತರ ವಿಶೇಷ ವ್ಯವಸ್ಥೆಗಳನ್ನು ಖಾತ್ರಿಪಡಿಸಲಾಗಿದೆ" ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಆಕಾಶ್ ಎಸ್. ವಿವರಿಸಿದ್ದಾರೆ.

ಜಿಲ್ಲೆಯಲ್ಲಿ ಮನೆಯಿಂದ ಮತ ಚಲಾಯಿಸಿದ 2474 ಮತದಾರರಲ್ಲಿ ಅಂಗವಿಕಲರು ಹಾಗೂ 80 ವರ್ಷ ಮೇಲ್ಪಟ್ಟ ಮತದಾರರು ಸೇರಿದಂತೆ 2362 ನಿವಾಸಿಗಳು ಮತದಾನ ಮಾಡಿದ್ದಾರೆ. ಜಿಲ್ಲಾ SVEEP ಸಮಿತಿಯಿಂದ 'ಸೆಲ್ಫಿ' ಸ್ಪರ್ಧೆಯನ್ನು ಆಯೋಜಿಸಲಾಗಿದೆ ಮತ್ತು  ಭಾಗವಹಿಸುವ ಪ್ರಮುಖ ಮೂರು  ಮಂದಿಗೆ ಚುನಾವಣಾ ಪ್ರಕ್ರಿಯೆಯ ನಂತರ ಉಡುಗೊರೆ ಚೀಟಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT