ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮೇ 13ರವರೆಗೆ ಭಾರಿ ಮಳೆ ಮುನ್ಸೂಚನೆ; ಮತದಾನಕ್ಕೆ ಅಡ್ಡಿ ಸಾಧ್ಯತೆ, ಅಭ್ಯರ್ಥಿಗಳಲ್ಲಿ ಆತಂಕ

ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ನಾಳೆ (ಮೇ 10) ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ.

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ನಾಳೆ (ಮೇ 10) ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ.

ಭಾನುವಾರ ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದ ಇತ್ತೀಚಿನ ಹವಾಮಾನ ವರದಿಯ ಪ್ರಕಾರ, ಮೇ 13ರವರೆಗೆ ನಗರದಲ್ಲಿ ಗುಡುಗು ಸಹಿತ ಮಳೆ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

ಮೇ 1 ರಿಂದ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ವಾಸ್ತವವಾಗಿ, ಮೇ 5 ರಂದು 40 ಮಿಮೀ ಮಳೆ ಸುರಿದಿದೆ. ಈ ಹಿಂದಿನ 24 ಗಂಟೆಗಳಲ್ಲಿ ಕೇವಲ ತುಂತುರು ಮಳೆಯಾಗಿದೆ. ಮೇ ತಿಂಗಳ ಮೊದಲ ಆರು ದಿನಗಳಲ್ಲಿ ನಗರದಲ್ಲಿ ಈಗಾಗಲೇ 107.8 ಮಿ.ಮೀ ಮಳೆಯಾಗಿದೆ.

ಈ ಸಮಯದಲ್ಲಿ, ತಮಿಳುನಾಡು ಕರಾವಳಿಯುದ್ದಕ್ಕೂ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಅಸ್ತಿತ್ವದಲ್ಲಿದೆ. ಆದರೆ, ಮತ್ತೊಂದು ಚಂಡಮಾರುತದ ಪರಿಚಲನೆಯು ಕರ್ನಾಟಕದ ಒಳಭಾಗದಲ್ಲಿ ಕಡಿಮೆ ಮಟ್ಟದಲ್ಲಿ ಅಸ್ತಿತ್ವದಲ್ಲಿದೆ. ಮುಂದಿನ ವಾರದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಒಂದು ಅಥವಾ ಎರಡು ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.

ಮೇ ತಿಂಗಳ ಮೊದಲಾರ್ಧದಲ್ಲಿಯೇ ಬೆಂಗಳೂರಿನಲ್ಲಿ ತನ್ನ ಮಾಸಿಕ ಸರಾಸರಿಯನ್ನು ಮೀರುವ ಮಳೆಯಾಗುವ ಸಾಧ್ಯತೆಯನ್ನು ಹೊಂದಿದೆ.

ಆದರೆ, ಹವಾಮಾನವು ಆಹ್ಲಾದಕರವಾಗಿ ಮುಂದುವರಿಯುತ್ತದೆ ಎಂದು ನಿರೀಕ್ಷಿಸಲಾಗಿದೆ. ಗರಿಷ್ಠ ತಾಪಮಾನವು 28 ಮತ್ತು 30 ಡಿಗ್ರಿಗಳ ನಡುವೆ ಮತ್ತು ಕನಿಷ್ಠ ತಾಪಮಾನವು 21 ಮತ್ತು 22 ಡಿಗ್ರಿಗಳ ನಡುವೆ ಇರುತ್ತದೆ. ಮುಂದಿನ 3 ರಿಂದ 4 ದಿನಗಳಲ್ಲಿ ದಕ್ಷಿಣ ಕರ್ನಾಟಕದ ಇತರ ಹಲವು ಪ್ರದೇಶಗಳಲ್ಲಿ ಮಳೆಯಾಗಬಹುದು. ಜೂನ್ 1 ರಂದು ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗಲಿದ್ದು, ಜೂನ್ 5 ರಂದು ಬೆಂಗಳೂರನ್ನು ತಲುಪುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT