ಅಭಿಮಾನಿ ನೀಡಿದ ಪಾದರಕ್ಷೆಯನ್ನು ತಲೆ ಮೇಲಿಟ್ಟುಕೊಂಡ ಬೆಲ್ಲದ್ 
ರಾಜ್ಯ

ಅಭಿಮಾನದ ಅತಿರೇಕವೋ ಚುನಾವಣೆ ಗಿಮಿಕ್ಕೋ?: ಅಭಿಮಾನಿ ನೀಡಿದ ಪಾದರಕ್ಷೆ ತಲೆ ಮೇಲಿಟ್ಟುಕೊಂಡ ಬೆಲ್ಲದ್‌!

ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ್ ಬೆಲ್ಲದ್ ಭಾನುವಾರ ತಮ್ಮ ನಿವಾಸದಲ್ಲಿ ಸಮ್ಗರ್ (ಚಮ್ಮಾರ) ಸಮುದಾಯದ ನಿಯೋಗವು ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ತಮ್ಮ ತಲೆಯ ಮೇಲೆ ಇರಿಸಿಕೊಂಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಧಾರವಾಡ: ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ್ ಬೆಲ್ಲದ್ ಭಾನುವಾರ ತಮ್ಮ ನಿವಾಸದಲ್ಲಿ ಸಮ್ಗರ್ (ಚಮ್ಮಾರ) ಸಮುದಾಯದ ನಿಯೋಗವು ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ತಮ್ಮ ತಲೆಯ ಮೇಲೆ ಇರಿಸಿಕೊಂಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಬೆಲ್ಲದ್ ಅವರ ಈ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಲಯಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಅವರನ್ನು ಹೊಗಳಿದರೆ ಇನ್ನು ಕೆಲವರು ಇದೊಂದು ರಾಜಕೀಯ ಗಿಮಿಕ್ ಎಂದಿದ್ದಾರೆ.

ಉಡುಗೊರೆಯನ್ನು ಗೌರವಿಸಬೇಕು ಆದರೆ ಅದನ್ನು ಮುಚ್ಚಿದ ಬಾಗಿಲುಗಳಲ್ಲಿ ಮಾಡಬಹುದಿತ್ತು. ಅವರು ಮತದಾರರನ್ನು ಆಕರ್ಷಿಸಲು ಮಾಡಿರುವ ಗಿಮಿಕ್ ಆಗಿದೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವಷ್ಟು ಜನಮನ್ನಣೆ ಹೊಂದಿರುವುದರಿಂದ ಪ್ರಚಾರಕ್ಕಾಗಿ ಇಂತಹ ಕೆಲಸಗಳನ್ನು ಮಾಡುವ ಅಗತ್ಯವಿಲ್ಲ ಎಂದು ಬೆಲ್ಲದ್ ಅನುಯಾಯಿಗಳು ತಮ್ಮ ನಾಯಕನನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ರಾಜಕೀಯವಾಗಿ, ಆರ್ಥಿಕವಾಗಿ, ಕೌಶಲ್ಯ ಅಭಿವೃದ್ಧಿ ಕೋರ್ಸ್‌ಗಳು ಮತ್ತು ಅವರಿಗಾಗಿ ಆಡಿಟೋರಿಯಂಗಳನ್ನು ನಿರ್ಮಿಸುವುದು ಸೇರಿದಂತೆ ಅನೇಕ ರೀತಿಯಲ್ಲಿ ಸಮುದಾಯಕ್ಕೆ ಸಹಾಯ ಮಾಡಿದ್ದೇನೆ. ಇದರಿಂದಾಗಿ ನಾನು ಮಾಡಿದ ಎಲ್ಲಾ ಕೆಲಸಕ್ಕೂ ಧನ್ಯವಾದ ಹೇಳಿದರು. ಅವರಿಂದ ಉಡುಗೊರೆಯನ್ನು ಸ್ವೀಕರಿಸುವುದರಿಂದ  ಅವರ ಭಾವನಾತ್ಮಕ ಮನಸ್ಸುಗಳಿಗೆ ಸಂತೋಷವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಅರವಿಂದ್ ಬೆಲ್ಲದ್ ತಿಳಿಸಿದ್ದಾರೆ.

ಮತದಾರರನ್ನು ಸೆಳೆಯಲು ನನಗೆ ಯಾವುದೇ ಸ್ಟಂಟ್‌ಗಳ ಅಗತ್ಯವಿಲ್ಲ. ಮತದಾರರು ಬುದ್ಧಿವಂತರು ಮತ್ತು ನೈಜ ಮತ್ತು ನಕಲಿ ಭಾವನೆಗಳ ನಡುವೆ ವ್ಯತ್ಯಾಸವನ್ನು ಪತ್ತೆ ಮಾಡುತ್ತಾರೆ. ಉಡುಗೊರೆ ನನಗೆ ಆಶ್ಚರ್ಯ ತಂದಿತು ಮತ್ತು ಅದನ್ನು ನನಗೆ ಕೊಟ್ಟಾಗ ನಾನು ಮೂಕ ವಿಸ್ಮಿತನಾದೆ ಎಂದು ಅವರು ಹೇಳಿದರು.

ಸಮ್ಗಾರ ಸಮಾಜದ ಮುಖಂಡರು ಮಾತನಾಡಿ, ಶಾಸಕರು ಸಾಕಷ್ಟು ಕೆಲಸ ಮಾಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು. "ನಾವು ತಲೆಮಾರುಗಳಿಂದ ಚರ್ಮದ ಉತ್ಪನ್ನಗಳನ್ನು ತಯಾರಿಸುತ್ತಿರುವ ಕಾರಣ ನಾವು ಅವರಿಗೆ ಪಾದರಕ್ಷೆಗಳನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದೇವೆ. ಅವರ ಹಾವಭಾವದಿಂದ ನಾವು ವಿನಮ್ರರಾಗಿದ್ದೇವೆ" ಎಂದು ಅವರಲ್ಲಿ ಒಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT