ಕರ್ನಾಟಕ ಹೈಕೋರ್ಟ್ 
ರಾಜ್ಯ

ಕರ್ನಾಟಕ ಚುನಾವಣೆ: ಮತ ಚಲಾಯಿಸಿ ಬಂದವರಿಗೆ ಉಚಿತ ತಿಂಡಿ-ತಿನಿಸುಗಳಿಗೆ ನಿರ್ಬಂಧ ಹೇರಿದ BBMP ಕ್ರಮಕ್ಕೆ ಹೈಕೋರ್ಟ್ ತಡೆ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತವಾಗಿ ತಿಂಡಿ-ತಿನಿಸು ನೀಡಲು ಮುಂದಾಗಿದ್ದ ಬೆಂಗಳೂರಿನ ಎರಡು ಹೋಟೆಲ್​ಗಳ ನಿರ್ಧಾರಕ್ಕೆ ನಿರ್ಬಂಧ ವಿಧಿಸಿದ್ದ ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. 

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತವಾಗಿ ತಿಂಡಿ-ತಿನಿಸು ನೀಡಲು ಮುಂದಾಗಿದ್ದ ಬೆಂಗಳೂರಿನ ಎರಡು ಹೋಟೆಲ್​ಗಳ ನಿರ್ಧಾರಕ್ಕೆ ನಿರ್ಬಂಧ ವಿಧಿಸಿದ್ದ ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. 

ಹೋಟೆಲ್ ಮಾಲೀಕರ ಸಂಘಟನೆ ಬಿಬಿಎಂಪಿ ಕ್ರಮದ ವಿರುದ್ಧ ಹೈಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ವೇಳೆ ಮತದಾನ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೆವು. ಇದಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಮನವಿ ಮಾಡಿದ್ದು ಇದಕ್ಕೆ ಹೈಕೋರ್ಟ್ ಸಮ್ಮತಿಸಿದೆ.

ನಗರದ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಮತ್ತು ಚಾಲುಕ್ಯ ಸಾಮ್ರಾಟ್ ಹೋಟೆಲ್​ಗಳು ಮತದಾನ ಮಾಡಿದ ಬಂದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯಗಳನ್ನು ನೀಡುವುದಾಗಿ ಪ್ರಕಟಣೆ ನೀಡಿದ್ದವು. ಆದರೆ, ಇದಕ್ಕೆ ಬಿಬಿಎಂಪಿ ಆಕ್ಷೇಪ ವ್ಯಕ್ತಪಡಿಸಿತ್ತು. 

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್, ಇಂತಹ ಆಫರ್​​ಗಳನ್ನು ಹೋಟೆಲ್​​ ಮಾಲೀಕರು ನೀಡಬಾರದು. ಇದಕ್ಕೆ ನಾವು ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದರು. ನಂತರ, ಇಂತಹ ಆಫರ್​​ಗಳನ್ನು ಹೋಟೆಲ್​​ ಮಾಲೀಕರು ನೀಡಬಾರದು ಎಂದು ಸೂಚನೆಯನ್ನೂ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT