ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಧ್ವನಿ ತಗ್ಗಿಸಿ ಫೋನ್ ನಲ್ಲಿ ಮಾತನಾಡಿ ಎಂದದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

ತನ್ನ ಮನೆ ಬಾಗಿಲ ಬಳಿ ಫೋನ್ ನಲ್ಲಿ ಮಾತನಾಡಿದ್ದಾತನಿಗೆ ಧ್ವನಿ ತಗ್ಗಿಸಿ ಮಾತನಾಡುವಂತೆ ಸೂಚಿಸಿದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಗಸಂದ್ರ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು: ತನ್ನ ಮನೆ ಬಾಗಿಲ ಬಳಿ ಫೋನ್ ನಲ್ಲಿ ಮಾತನಾಡಿದ್ದಾತನಿಗೆ ಧ್ವನಿ ತಗ್ಗಿಸಿ ಮಾತನಾಡುವಂತೆ ಸೂಚಿಸಿದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಗಸಂದ್ರ ರಸ್ತೆಯಲ್ಲಿ ನಡೆದಿದೆ.

ಹೊಂಗನಸಂದ್ರದ 7ನೇ ಮೇನ್ ನಿವಾಸಿ ಜಿ ಶಿವಾ ರೆಡ್ಡಿ (28) ಥಳಿತಕ್ಕೊಳಗಾದ ವ್ಯಕ್ತಿಯಾಗಿದ್ದು, ಆರೋಪಿಯನ್ನು ಶರತ್ ಎಂದು ಗುರ್ತಿಸಲಾಗಿದೆ. ಶನಿವಾರ ಸಂಜೆ 7.40ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಆರೋಪಿ ಶರತ್ ಶಿವಾ ಅವರ ಮನೆಯ ಬಳಿಕ ಫೋನ್ ನಲ್ಲಿ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ. ಇದನ್ನು ಕೇಳಿಸಿಕೊಂಡ ಶಿವಾ, ಬಾಗಿಲು ತೆರೆದು ಧ್ವನಿ ತಗ್ಗಿಸಿ ಮಾತನಾಡುವಂತೆ ಸೂಚಿಸಿದ್ದಾನೆ. ಈ ವೇಳೆ ಶರತ್ ಮಾತಿನ ಚಕಮಕಿಗೆ ಇಳಿದಿದ್ದು, ಬಳಿಕ ಮನೆಗೆ ನುಗ್ಗಿ, ಬಾಗಿಲು ಹಾಕಿ ಮನಬಂದಂತೆ ಥಳಿಸಿದ್ದಾನೆ. ಅಲ್ಲದೆ, ಬೆದರಿಕೆ ಹಾಕಿದ್ದಾನೆಂದು ತಿಳಿದುಬಂದಿದೆ.

ಶಿವಾ ವೃತ್ತಿಯಲ್ಲಿ ಚಾಲಕನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಮರುದಿನ ಶಿವಾ ಅವರು ಬೊಮ್ಮನಹಳ್ಳಇ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT