ಮೋದಿ ರೋಡ್ ಶೋ 
ರಾಜ್ಯ

ಮೋದಿ ರೋಡ್ ಶೋ, ರ‍್ಯಾಲಿಗಳಿಂದ ಶೇ. 50-60 ರಷ್ಚು ಮತಗಳು ಬಿಜೆಪಿಗೆ ಪರಿವರ್ತನೆ: ಜೋಶಿ

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸರಣಿ ರ‍್ಯಾಲಿಗಳು ಮತ್ತು ರೋಡ್‌ ಶೋಗಳು ಶೇ. 50-60 ರಷ್ಚು ಮತಗಳನ್ನು ಬಿಜೆಪಿ ಪರವಾಗಿ ತಿರುಗಿಸಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

ಹುಬ್ಬಳ್ಳಿ: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸರಣಿ ರ‍್ಯಾಲಿಗಳು ಮತ್ತು ರೋಡ್‌ ಶೋಗಳು ಶೇ. 50-60 ರಷ್ಚು ಮತಗಳನ್ನು ಬಿಜೆಪಿ ಪರವಾಗಿ ತಿರುಗಿಸಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಪಕ್ಷದ ಕೇಂದ್ರ ನಾಯಕರು ನಡೆಸಿದ ಪ್ರಚಾರದ ಹೊರತಾಗಿ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮತದಾರರ ಸ್ಪಂದನೆ ಮತ್ತು ಮೀಸಲಾತಿ ಕೋಟಾ ಮರುವಿಂಗಡಣೆಗೆ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ತೆಗೆದುಕೊಂಡ ಕ್ರಿಯಾತ್ಮಕ ನಿರ್ಧಾರವು ಪಕ್ಷಕ್ಕೆ ಲಾಭದಾಯಕವಾಗಿದೆ ಎಂದಿದ್ದಾರೆ.

ನಾಯಕರ ಸಂಘಟಿತ ಕೆಲಸ, ವ್ಯವಸ್ಥಿತ ಪ್ರಚಾರ ಮತ್ತು ಕೇಂದ್ರ ನಾಯಕತ್ವದ ಸಕ್ರಿಯ ಭಾಗವಹಿಸುವಿಕೆಯಿಂದಾಗಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪಕ್ಷದ ಆಂತರಿಕ ಸಮೀಕ್ಷೆಯಿಂದ ತಿಳಿದುಬಂದಿದೆ ಎಂದು ಜೋಶಿ ಹೇಳಿದರು.

ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳು ಮತ್ತು ಈ ಹಿಂದೆ ಈಡೇರಿಸಿರುವ ಭರವಸೆಗಳು ಪಕ್ಷದ ಪರವಾಗಿ ಸಕಾರಾತ್ಮಕ ಸಂಕೇತ ರವಾನಿಸಿವೆ.  ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸ್ವಲ್ಪ ಅವಕಾಶ ಸಿಕ್ಕಿದರೂ, ಮರುವಿಂಗಡಣೆ ಮೀಸಲಾತಿ ಕೋಟಾವನ್ನು ಹಿಂಪಡೆಯುತ್ತದೆ, ಹೀಗಾಗಿ ಪಕ್ಷ ನೀಡಿದ ಭರವಸೆಗಳ ಬಗ್ಗೆ ಜನರು ಯೋಚಿಸಬೇಕು ಎಂದು ಹೇಳಿದರು.

ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಾಗಿದೆ, 2024 ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸೋಲು ಸನ್ನಿಹಿತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಮಾತ್ರ ಗ್ರ್ಯಾಂಡ್ ಓಲ್ಡ್ ಪಾರ್ಟಿ ಆಡಳಿತ ನಡೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel