ಸಿಎಂ ಬೊಮ್ಮಾಯಿ 
ರಾಜ್ಯ

ಹನುಮಂತ ಎಂದರೆ ರಾಮ ಹೇಗೋ ಬಜರಂಗದಳ ಎಂದರೆ ಬಜರಂಗಬಲಿ: ಸಿಎಂ ಬೊಮ್ಮಾಯಿ

ರಾಮ ಎಂದರೆ ಹನುಮತ ಹೇಗೋ ಹಾಗೆಯೇ ಬಜರಂಗದಳ ಎಂದರೆ ಬಜರಂಗಬಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ರಾಮ ಎಂದರೆ ಹನುಮತ ಹೇಗೋ ಹಾಗೆಯೇ ಬಜರಂಗದಳ ಎಂದರೆ ಬಜರಂಗಬಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಹುಬ್ಬಳ್ಳಿಯ ಆಂಜನೇಯ ದೇವಸ್ಥಾನಕ್ಕಿಂದು ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಹನುಮಾನ್ ಚಾಲೀಸಾ ಪಠಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯ ಜನತೆ ಬಿಜೆಪಿಗೆ ಮತ ಹಾಕಲು ಈಗಾಗಲೇ ನಿರ್ಧರಿಸಿದ್ದಾರೆ. ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತಿದ್ದೇನೆ, ರಾಜ್ಯ ಜನತೆ ಅಭಿವೃದ್ಧಿ, ಪ್ರಗತಿ ಮತ್ತು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಲಿಷ್ಠ ರಾಜ್ಯ ಮತ್ತು ದಕ್ಷ ಆಡಳಿತಕ್ಕೆ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ಹೇಳಿದರು.

ಇದೇ ವೇಳೆ ಹನುಮಾನ್ ಚಾಲೀಸಾ ಪಠಣೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿ, ನಾವು ಹನುಮಂತನನ್ನು ನಂಬುತ್ತೇವೆ. ರಾಮನನ್ನು ನಂಬುತ್ತೇವೆ. ಹನುಮಂತ ಎಂದರೆ ಶಕ್ತಿಯ ಮೂಲ. ಹೀಗಾಗಿ ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಿದೆ. ಪ್ರತೀನಿತ್ಯ ನಾನು ಹನುಮಂತನ ಪ್ರಾರ್ಥಿಸುತ್ತೇನೆ. ಆದರಿಂದು ಸಾರ್ವಜನಿಕರ ಮುಂದೆ ಪ್ರಾರ್ಥನೆ ಸಲ್ಲಿಸಿದ್ದೇನೆಂದು ತಿಳಿಸಿದರು.

ಬಂಜರಂಗದಳವನ್ನು ಬಿಜೆಪಿ ಬಜರಂಗಬಲಿಗೆ ಏಕೆ ಹೋಲಿಸುತ್ತಿದೆ ಎಂದ ಕಾಂಗ್ರೆಸ್ ಪ್ರಶ್ನೆಗೆ ಉತ್ತರಿಸಿ, ಹನುಮಂತ ಎಂದರೆ ರಾಮ ಹೇಗೋ ಅದೇ ರೀತಿ ಬಜರಂಗದಳ ಎಂದರೆ ಬಜರಂಗಬಲಿಯಾಗಿದೆ ಎಂದರು.

ಭ್ರಷ್ಟಾಚಾರ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪ ಕುರಿತು ಪ್ರತಿಕ್ರಿಯಿಸಿ, ಇದೆಲ್ಲವೂ ಆಧಾರ ರಹಿತ ಆರೋಪಗಳಾಗಿವೆ. ಲೋಕಾಯುಕ್ತ ಈ ಬಗ್ಗೆ ತನಿಖೆ ಮಾಡಲಿ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT