ಸಿಎಂ ಬೊಮ್ಮಾಯಿ 
ರಾಜ್ಯ

ಹನುಮಂತ ಎಂದರೆ ರಾಮ ಹೇಗೋ ಬಜರಂಗದಳ ಎಂದರೆ ಬಜರಂಗಬಲಿ: ಸಿಎಂ ಬೊಮ್ಮಾಯಿ

ರಾಮ ಎಂದರೆ ಹನುಮತ ಹೇಗೋ ಹಾಗೆಯೇ ಬಜರಂಗದಳ ಎಂದರೆ ಬಜರಂಗಬಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ರಾಮ ಎಂದರೆ ಹನುಮತ ಹೇಗೋ ಹಾಗೆಯೇ ಬಜರಂಗದಳ ಎಂದರೆ ಬಜರಂಗಬಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಹುಬ್ಬಳ್ಳಿಯ ಆಂಜನೇಯ ದೇವಸ್ಥಾನಕ್ಕಿಂದು ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಹನುಮಾನ್ ಚಾಲೀಸಾ ಪಠಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯ ಜನತೆ ಬಿಜೆಪಿಗೆ ಮತ ಹಾಕಲು ಈಗಾಗಲೇ ನಿರ್ಧರಿಸಿದ್ದಾರೆ. ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತಿದ್ದೇನೆ, ರಾಜ್ಯ ಜನತೆ ಅಭಿವೃದ್ಧಿ, ಪ್ರಗತಿ ಮತ್ತು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಲಿಷ್ಠ ರಾಜ್ಯ ಮತ್ತು ದಕ್ಷ ಆಡಳಿತಕ್ಕೆ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ಹೇಳಿದರು.

ಇದೇ ವೇಳೆ ಹನುಮಾನ್ ಚಾಲೀಸಾ ಪಠಣೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿ, ನಾವು ಹನುಮಂತನನ್ನು ನಂಬುತ್ತೇವೆ. ರಾಮನನ್ನು ನಂಬುತ್ತೇವೆ. ಹನುಮಂತ ಎಂದರೆ ಶಕ್ತಿಯ ಮೂಲ. ಹೀಗಾಗಿ ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಿದೆ. ಪ್ರತೀನಿತ್ಯ ನಾನು ಹನುಮಂತನ ಪ್ರಾರ್ಥಿಸುತ್ತೇನೆ. ಆದರಿಂದು ಸಾರ್ವಜನಿಕರ ಮುಂದೆ ಪ್ರಾರ್ಥನೆ ಸಲ್ಲಿಸಿದ್ದೇನೆಂದು ತಿಳಿಸಿದರು.

ಬಂಜರಂಗದಳವನ್ನು ಬಿಜೆಪಿ ಬಜರಂಗಬಲಿಗೆ ಏಕೆ ಹೋಲಿಸುತ್ತಿದೆ ಎಂದ ಕಾಂಗ್ರೆಸ್ ಪ್ರಶ್ನೆಗೆ ಉತ್ತರಿಸಿ, ಹನುಮಂತ ಎಂದರೆ ರಾಮ ಹೇಗೋ ಅದೇ ರೀತಿ ಬಜರಂಗದಳ ಎಂದರೆ ಬಜರಂಗಬಲಿಯಾಗಿದೆ ಎಂದರು.

ಭ್ರಷ್ಟಾಚಾರ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪ ಕುರಿತು ಪ್ರತಿಕ್ರಿಯಿಸಿ, ಇದೆಲ್ಲವೂ ಆಧಾರ ರಹಿತ ಆರೋಪಗಳಾಗಿವೆ. ಲೋಕಾಯುಕ್ತ ಈ ಬಗ್ಗೆ ತನಿಖೆ ಮಾಡಲಿ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT