ರಘು ಆಚಾರ್ 
ರಾಜ್ಯ

ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ; 58 ಲಕ್ಷ ರೂ. ಜಪ್ತಿ

ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ಮತದಾರರಿಗೆ ಹಂಚಲು ಇಟ್ಟಿದ್ದ ಕವರ್‌ಗಳಲ್ಲಿ ನಗದು ಪತ್ತೆಯಾಗಿದೆ. ಕವರ್‌ಗಳಲ್ಲಿ ಸುಮಾರು 50 ಲಕ್ಷ ರೂಪಾಯಿ ನಗದು ಮತ್ತು ಮನೆಯ ಇತರ ಸ್ಥಳಗಳಲ್ಲಿ ಸುಮಾರು 8.83 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ದಾಳಿ ನಡೆಸಿದ್ದ ಅಧಿಕಾರಿಗಳು ಇಂದೂ‌ ಕೂಡಾ ತಪಾಸಣೆ ಮುಂದುವರೆಸಿದ್ದಾರೆ.ವಿಚಕ್ಷಣಾ‌ ದಳದ ಅಧಿಕಾರಿ ರಾಘವೇಂದ್ರ, ಅಬಕಾರಿ‌ ಅಧಿಕಾರಿ ಇಮ್ರಾನ್, ನೋಡೆಲ್ ಅಧಿಕಾರಿ ಮಧುಸೂದನ್ ನೇತೃತ್ವ ದಲ್ಲಿ ದಾಳಿ ನಡೆದಿದೆ.

ಅಲ್ಲದೆ, 239 ಲೀಟರ್ ಬಿಯರ್ ಮತ್ತು 9 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಬುಧವಾರವೂ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮತ್ತೊಂದು ಘಟನೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಾದಿಕ್‌ನಗರದಲ್ಲಿ 1.08 ಲಕ್ಷ ರೂ. ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲೂ ಪೊಲೀಸರು 4.25 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.‌ ಇದರೊಟ್ಟಿಗೆ ಅಂಚೆ ಮತದಾರರ ಪಟ್ಟಿಯೂ ಲಭ್ಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT