ರಾಜ್ಯ

ಕರ್ನಾಟಕ ಚುನಾವಣೆ 2023: ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹಣ ಹಂಚಿಕೆ ಆರೋಪ: ಜಮೀರ್ ಗೆ ಮತ ನೀಡುವಂತೆ ಮನವಿ, ವಿಡಿಯೋ ವೈರಲ್

Srinivasamurthy VN

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಇತ್ತ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮತದಾರರಾಗಿ ಹಣ ಹಂಚುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಜಮೀರ್ ಅಹ್ಮದ್ ಅವರಿಗೆ ಮತ ನೀಡುವಂತೆ ಮತದಾರರಿಗೆ ಹೇಳುತ್ತಿದ್ದಾರೆ. 

ಮತದಾರರಿಗೆ ಟೋಕನ್ ಗಳನ್ನು ವಿತರಿಸಿ.. ಹಣ ಪಡೆದ ಮತದಾರರಿಂದ ಮತ್ತೆ ಆ ಟೋಕನ್ ವಾಪಸ್ ಪಡೆದು ಅವರಿಗೆ ತಲಾ 500 ರೂ ನೀಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. 

SCROLL FOR NEXT