ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ 
ರಾಜ್ಯ

ಕರ್ನಾಟಕ ಚುನಾವಣೆ 2023: ಸ್ವಗ್ರಾಮದಲ್ಲಿ ಮಾಜಿ ಸಿಎಂ ಮತದಾನ; ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ!

ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಅವರ  ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ. 

ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಅವರ  ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ. 

ಹೌದು.. ಇಂದು ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದು, ಈ ವೇಳೆ ಅಳಿಸಲಾಗದ ಶಾಯಿಯನ್ನು ಅವರ ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ.

ಆದರೆ ಸಿದ್ದರಾಮಯ್ಯ ಜೊತೆಯಲ್ಲಿ ಬಂದಿದ್ದ ಅವರ ಪುತ್ರ ಡಾ. ಯತೀಂದ್ರ ಮತ್ತು ಸೊಸೆ ಸ್ಮಿತ ರಾಕೇಶ್ ಅವರಿಗೆ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದು, ಸಿದ್ದರಾಮಯ್ಯ ಅವರಿಗೆ ಬಲಗೈ ಬೆರಳಿಗೆ ಶಾಯಿ ಹಾಕಲಾಗಿದೆ.

ಮೈಸೂರು ನಗರದಿಂದ ಬೆಳಿಗ್ಗೆ 10 ಗಂಟೆಗೆ ಸಿದ್ದರಾಮನಹುಂಡಿಗೆ ಆಗಮಿಸಿದ್ದ ಸಿದ್ದರಾಮಯ್ಯ ತಮ್ಮ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ, ಸೊಸೆ ಸ್ಮಿತಾ ರಾಕೇಶ್ ಜತೆಗೂಡಿ ಮತದಾನ ಮಾಡಿದರು. ಇದಕ್ಕೂ ಮೊದಲು ಗುರುತಿನ ಚೀಟಿ ಪರಿಶೀಲಿಸಿ, ಶಾಯಿ ಹಾಕುವಾಗ ಸಿಬ್ಬಂದಿ ಡಾ. ಯತೀಂದ್ರ ಮತ್ತು ಸ್ಮಿತ ರಾಕೇಶ್ ಅವರಿಗೆ ಎಡಗೈ ಬೆರಳಿಗೆ ಶಾಯಿ ಹಾಕಿದರು. ಆದರೆ ಸಿದ್ದರಾಮಯ್ಯ ಅವರಿಗೆ ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ.

ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಶಿಷ್ಠಾಚಾರದಂತೆ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಬೇಕು.. ಒಂದು ವೇಳೆ ಬೇರಾವುದೇ ಚುನಾವಣೆಗಳಿಂದ ಮತದಾರ ಮತದಾನ ಮಾಡಿದಾಗ ಶಾಯಿ ಹಾಕಿದ್ದರೆ ಆಗ ಮಾತ್ರ ಬೇರೆ ಬೆರಳಿಗೆ ಶಾಯಿ ಹಾಕಲಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಇರಾನ್ ಯುದ್ಧ, ಉಕ್ರೇನ್ ಬಗ್ಗೆ ಪುಟಿನ್, ಟ್ರಂಪ್ ಚರ್ಚೆ: ಕ್ರೆಮ್ಲಿನ್ ಹೇಳಿದ್ದೇನು?

ಕಾಂಗ್ರೆಸ್ ಹೈಕಮಾಂಡ್​ನಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಯ ಸುಳಿವು; ಇಡೀ ಸಂಪುಟವೇ ಚೇಂಜ್ ಸಾಧ್ಯತೆ

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆ ಮಳೆ: ನಗರದಲ್ಲಿ ಭಾರೀ ಅವಾಂತರ, 9 ಜೀವಗಳು ಬಲಿ.!

SCROLL FOR NEXT