ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ 
ರಾಜ್ಯ

ಕರ್ನಾಟಕ ಚುನಾವಣೆ 2023: ಸ್ವಗ್ರಾಮದಲ್ಲಿ ಮಾಜಿ ಸಿಎಂ ಮತದಾನ; ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ!

ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಅವರ  ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ. 

ಮೈಸೂರು: ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಅವರ  ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ. 

ಹೌದು.. ಇಂದು ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದು, ಈ ವೇಳೆ ಅಳಿಸಲಾಗದ ಶಾಯಿಯನ್ನು ಅವರ ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ.

ಆದರೆ ಸಿದ್ದರಾಮಯ್ಯ ಜೊತೆಯಲ್ಲಿ ಬಂದಿದ್ದ ಅವರ ಪುತ್ರ ಡಾ. ಯತೀಂದ್ರ ಮತ್ತು ಸೊಸೆ ಸ್ಮಿತ ರಾಕೇಶ್ ಅವರಿಗೆ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದು, ಸಿದ್ದರಾಮಯ್ಯ ಅವರಿಗೆ ಬಲಗೈ ಬೆರಳಿಗೆ ಶಾಯಿ ಹಾಕಲಾಗಿದೆ.

ಮೈಸೂರು ನಗರದಿಂದ ಬೆಳಿಗ್ಗೆ 10 ಗಂಟೆಗೆ ಸಿದ್ದರಾಮನಹುಂಡಿಗೆ ಆಗಮಿಸಿದ್ದ ಸಿದ್ದರಾಮಯ್ಯ ತಮ್ಮ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ, ಸೊಸೆ ಸ್ಮಿತಾ ರಾಕೇಶ್ ಜತೆಗೂಡಿ ಮತದಾನ ಮಾಡಿದರು. ಇದಕ್ಕೂ ಮೊದಲು ಗುರುತಿನ ಚೀಟಿ ಪರಿಶೀಲಿಸಿ, ಶಾಯಿ ಹಾಕುವಾಗ ಸಿಬ್ಬಂದಿ ಡಾ. ಯತೀಂದ್ರ ಮತ್ತು ಸ್ಮಿತ ರಾಕೇಶ್ ಅವರಿಗೆ ಎಡಗೈ ಬೆರಳಿಗೆ ಶಾಯಿ ಹಾಕಿದರು. ಆದರೆ ಸಿದ್ದರಾಮಯ್ಯ ಅವರಿಗೆ ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ.

ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಶಿಷ್ಠಾಚಾರದಂತೆ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಬೇಕು.. ಒಂದು ವೇಳೆ ಬೇರಾವುದೇ ಚುನಾವಣೆಗಳಿಂದ ಮತದಾರ ಮತದಾನ ಮಾಡಿದಾಗ ಶಾಯಿ ಹಾಕಿದ್ದರೆ ಆಗ ಮಾತ್ರ ಬೇರೆ ಬೆರಳಿಗೆ ಶಾಯಿ ಹಾಕಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT