ಮತಹಕ್ಕು ಚಲಾಯಿಸುತ್ತಿರುವ ಸಿದ್ದಗಂಗಾ ಮಠದ ಶ್ರೀಗಳು. 
ರಾಜ್ಯ

ಆಸೆ, ಆಮಿಷಗಳಿಗೆ ಒಳಗಾಗದೇ ಮತ ಹಕ್ಕು ಚಲಾಯಿಸಿ: ಮತದಾರರಿಗೆ ಸಿದ್ದಗಂಗಾ ಶ್ರೀ

ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ತುಮಕೂರು: ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ತುಮಕೂರಿನಲ್ಲಿ ತಮ್ಮ ಹಕ್ಕು ಚಲಾಯಿಸಿದ ಬಳಿಕ ಮಾತನಾಡಿರುವ ಶ್ರೀಗಳು, ಆಮಿಷಗಳಾಗಿ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಮತಚಲಾಯಿಸಬೇಕು. ಈ ಮೂಲಕ ಅದರ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದರು.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಅವರವರ ಮತಗಟ್ಟೆಗೆ ಹೋಗಿ ಮತದಾನ ಮಾಡಿ. ಈ ಸಂದರ್ಭದಲ್ಲಿ ಯಾರೂ ಮನೆಯಲ್ಲಿ ಉಳಿಯಬೇಡಿ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ನ್ಯಾಯ ಹಾಗೂ ಮುಕ್ತವಾದ ರೀತಿಯಲ್ಲಿ ಮತದಾನ ಮಾಡುವಂತದ್ದಾಗಿದೆ. ಅವರವರ ಇಚ್ಚೆಯಲ್ಲಿ ಅವರವರಿಗೆ ಇಷ್ಟವಾದ ಅಭ್ಯರ್ಥಿಗೆ ಮತ ನೀಡುವಂತದ್ದಾಗಿದೆ ಎಂದು ತಿಳಿಸಿದರು.

ಭಾರತೀಯ ಪ್ರಜೆಗಳಾಗಿ ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ಚಲಾವಣೆ ಮಾಡಬೇಕು. ಇವತ್ತು ನೂರಕ್ಕೆ ನೂರು ಮತದಾನ ಆಗುತ್ತಿರುವುದು ಬಹಳ ಅಪರೂಪ ಆಗಿದೆ. ಇದು ಪ್ರಜಾಪ್ರಭುತ್ವದ ಪೂರ್ಣ ಯಶಸ್ಸಿಗೆ ಕಾರಣವಾಗುತ್ತಿದೆ. ಜನ ಮತದಾನದಲ್ಲಿ ಭಾಗವಹಿಸುವಂತಹ ಮನೋಭಾವನೆ ಇಟ್ಟುಕೊಳ್ಳಬೇಕು. 18 ವರ್ಷ ಎಲ್ಲಾ ಯುವಕ- ಯುವತಿಯರು ಕೂಡ ಮತದಾನದಲ್ಲಿ ಭಾಗವಹಿಸುತ್ತಿದ್ದಾರೆ. ವಯಸ್ಸಾದವರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT