ಮತಹಕ್ಕು ಚಲಾಯಿಸುತ್ತಿರುವ ಸಿದ್ದಗಂಗಾ ಮಠದ ಶ್ರೀಗಳು. 
ರಾಜ್ಯ

ಆಸೆ, ಆಮಿಷಗಳಿಗೆ ಒಳಗಾಗದೇ ಮತ ಹಕ್ಕು ಚಲಾಯಿಸಿ: ಮತದಾರರಿಗೆ ಸಿದ್ದಗಂಗಾ ಶ್ರೀ

ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ತುಮಕೂರು: ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ತುಮಕೂರಿನಲ್ಲಿ ತಮ್ಮ ಹಕ್ಕು ಚಲಾಯಿಸಿದ ಬಳಿಕ ಮಾತನಾಡಿರುವ ಶ್ರೀಗಳು, ಆಮಿಷಗಳಾಗಿ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಮತಚಲಾಯಿಸಬೇಕು. ಈ ಮೂಲಕ ಅದರ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದರು.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಅವರವರ ಮತಗಟ್ಟೆಗೆ ಹೋಗಿ ಮತದಾನ ಮಾಡಿ. ಈ ಸಂದರ್ಭದಲ್ಲಿ ಯಾರೂ ಮನೆಯಲ್ಲಿ ಉಳಿಯಬೇಡಿ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ನ್ಯಾಯ ಹಾಗೂ ಮುಕ್ತವಾದ ರೀತಿಯಲ್ಲಿ ಮತದಾನ ಮಾಡುವಂತದ್ದಾಗಿದೆ. ಅವರವರ ಇಚ್ಚೆಯಲ್ಲಿ ಅವರವರಿಗೆ ಇಷ್ಟವಾದ ಅಭ್ಯರ್ಥಿಗೆ ಮತ ನೀಡುವಂತದ್ದಾಗಿದೆ ಎಂದು ತಿಳಿಸಿದರು.

ಭಾರತೀಯ ಪ್ರಜೆಗಳಾಗಿ ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ಚಲಾವಣೆ ಮಾಡಬೇಕು. ಇವತ್ತು ನೂರಕ್ಕೆ ನೂರು ಮತದಾನ ಆಗುತ್ತಿರುವುದು ಬಹಳ ಅಪರೂಪ ಆಗಿದೆ. ಇದು ಪ್ರಜಾಪ್ರಭುತ್ವದ ಪೂರ್ಣ ಯಶಸ್ಸಿಗೆ ಕಾರಣವಾಗುತ್ತಿದೆ. ಜನ ಮತದಾನದಲ್ಲಿ ಭಾಗವಹಿಸುವಂತಹ ಮನೋಭಾವನೆ ಇಟ್ಟುಕೊಳ್ಳಬೇಕು. 18 ವರ್ಷ ಎಲ್ಲಾ ಯುವಕ- ಯುವತಿಯರು ಕೂಡ ಮತದಾನದಲ್ಲಿ ಭಾಗವಹಿಸುತ್ತಿದ್ದಾರೆ. ವಯಸ್ಸಾದವರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!

Los Angeles ಭೇಟಿಗೂ ಮುನ್ನ ಟ್ರಂಪ್‌ಗೆ ಆಘಾತ; ಗಾಲ್ಫ್‌ ಮೈದಾನದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ, ಹತ್ಯೆಗೆ ಸಂಚು ಶಂಕೆ..!

ಭಾರತದ ಯುವಜನತೆ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ: ಭಾವನಾತ್ಮಕ Video ಮೂಲಕ ಮನದಾಳದ ಮಾತು ಹಂಚಿಕೊಂಡ ಸೋನಂ ವಾಂಗ್‌ಚುಕ್‌

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!