ರಾಜ್ಯ

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ

Sumana Upadhyaya

ಬೆಳಗಾವಿ: ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಕರೆತಂದಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಹಲವಾರು ನಕಲಿ ಮತದಾರರು ತಾವು ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ರಾತ್ರಿ ವಿಜಯಪುರ ನಗರಕ್ಕೆ ಅವರನ್ನು ಕರೆತಂದು ವಿಜಯಪುರ ನಗರದಲ್ಲಿ ತಂಗುವಂತೆ ಮಾಡಲಾಗಿತ್ತು ಎಂದು ಒಬ್ಬರು ತಿಳಿಸಿದ್ದಾರೆ. 

ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದ್ದು, ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

SCROLL FOR NEXT