ನಕಲಿ ಐಡಿ ಪತ್ತೆ ಹಚ್ಚಿದ ಪೊಲೀಸರು 
ರಾಜ್ಯ

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೆಳಗಾವಿ: ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಕರೆತಂದಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಹಲವಾರು ನಕಲಿ ಮತದಾರರು ತಾವು ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ರಾತ್ರಿ ವಿಜಯಪುರ ನಗರಕ್ಕೆ ಅವರನ್ನು ಕರೆತಂದು ವಿಜಯಪುರ ನಗರದಲ್ಲಿ ತಂಗುವಂತೆ ಮಾಡಲಾಗಿತ್ತು ಎಂದು ಒಬ್ಬರು ತಿಳಿಸಿದ್ದಾರೆ. 

ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದ್ದು, ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT