ರಾಜ್ಯ

ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಿಂದ ಮತದಾರರಿಗೆ ಲಂಚ: ಎಂಇಎಸ್ ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪ

Manjula VN

ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯೊಬ್ಬರ ಬೆಂಬಲಿಗರು ಮನೆ ಮನೆಗೆ ತೆರಳಿ ತಮಗೆ ಮತ ನೀಡುವಂತೆ ಹಣ ನೀಡಿ ಆಮಿಷವೊಡ್ಡಿದ್ದರು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪಿಸಿದ್ದಾರೆ.

ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೊಂಡೂಸ್ಕರ್, ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯೊಬ್ಬರ ಬೆಂಬಲಿಗರು ಮತದಾರರಿಗೆ ಲಂಚ ನೀಡುತ್ತಿರುವುದು ಎಲ್ಲರಿಗೂ ತಿಳಿದಿದೆ. ಆದರೂ, ಲಂಚ ಕೊಡುವವರನ್ನು ಯಾರೂ ನಿರ್ಬಂಧಿಸುತ್ತಿಲ್ಲ ಎಂದು ಹೇಳಿದರು.

ಮತದಾರರಿಗೆ ಮದ್ಯ ಹಂಚುತ್ತಿರುವ ವಿಚಾರ ತಿಳಿದ ಕೂಡಲೇ ನಮ್ಮ ಬೆಂಬಲಿಗರು ಆರು ಕಡೆ ದಾಳಿ ನಡೆಸಿ ಮದ್ಯದ ದಾಸ್ತಾನುಗಳನ್ನು ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ಹಣದಿಂದ ಮತವನ್ನು ಖರೀದಿಸಲು ಸಾಧ್ಯವಿಲ್ಲ ಎಂಬುದನ್ನು ಜನರು ಸಾಬೀತುಪಡಿಸುವ ಸಮಯ ಬಂದಿದೆ. ಜನರು ಶಾಂತಿಯುತ ಜೀವನವನ್ನು ಬಯಸುತ್ತಿದ್ದಾರೆ. ಭಯದಿಂದಲ್ಲ. ಹೀಗಾಗಿ ತಮ್ಮ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡಿದ ಅಭ್ಯರ್ಥಿಗೆ ಮಾತ್ರ ಮತ ಹಾಕಿದ್ದಾರೆಂಬ ವಿಶ್ವಾಸ ನನಗಿದೆ ಎಂದರು.

ಮಂಗಳವಾರ ರಾತ್ರಿ ಶಹಾಪುರ ಪೊಲೀಸ್ ಠಾಣೆ ಎದುರು ತಮ್ಮ ವಿರುದ್ಧ ಘೋಷಣೆ ಕೂಗಿದ ಮಹಿಳೆಯರ ಬಗ್ಗೆ ಕುರಿತು ಮಾತನಾಡಿದ ಅವರು, ಹಣ ನೀತಿ ಮಹಿಳೆಯರು ನನ್ನ ವಿರುದ್ಧ ಪ್ರತಿಭಟಿಸುವಂತೆ ಸೂಚಿಸಲಾಗಿದೆ. ಲಂಚದ ರೂಪದಲ್ಲಿ ಮದ್ಯ ವಿತರಣೆ ಮಾಡುತ್ತಿರುವುದನ್ನು ನಿಲ್ಲಿಸಲು ನಾನು ಮುಂದಾಗಿದ್ದೆ. ಹೀಗಾಗಿಯೇ ಸ್ಥಳಗಳ ಮೇಲೆ ದಾಳಿ ಮಾಡಲಾಗಿತ್ತು. ಇದನ್ನು ಮಹಿಳೆಯರೇಕೆ ವಿರೋಧಿಸಬೇಕು ಎಂದು ಪ್ರಶ್ನಿಸಿದರು.

SCROLL FOR NEXT