ಸಾಂದರ್ಭಿಕ ಚಿತ್ರ 
ರಾಜ್ಯ

ಕಳೆದ ಮೂರು ವಿಧಾನಸಭೆ ಚುನಾವಣೆಯಲ್ಲಿ ಆದ ಶೇಕಡಾವಾರು ಮತದಾನವೆಷ್ಟು? ಅಂಕಿಅಂಶ ಹಂಚಿಕೊಂಡ ಚುನಾವಣಾ ಆಯೋಗ

ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಮುಗಿದು ಇನ್ನೇನು ಕನ್ನಡಿಗರೆಲ್ಲರೂ ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮಾಧ್ಯಮಗಳಲ್ಲಿ ಫಲಿತಾಂಶ ಪೂರ್ವ ಸಮೀಕ್ಷೆಗಳು ಹೊರಬಿದ್ದಿವೆ. ಸಾರ್ವಜನಿಕರು ಕೂಡ ತಮ್ಮದೇ ರೀತಿಯಲ್ಲಿ ಚರ್ಚೆ, ವಿಮರ್ಶೆಗಳು ನಡೆಸುತ್ತಿದ್ದಾರೆ. ನಾಡಿದ್ದು ಶನಿವಾರ ಮಧ್ಯಾಹ್ನ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಬೆಂಗಳೂರು: ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಮುಗಿದು ಇನ್ನೇನು ಕನ್ನಡಿಗರೆಲ್ಲರೂ ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮಾಧ್ಯಮಗಳಲ್ಲಿ ಫಲಿತಾಂಶ ಪೂರ್ವ ಸಮೀಕ್ಷೆಗಳು ಹೊರಬಿದ್ದಿವೆ. ಸಾರ್ವಜನಿಕರು ಕೂಡ ತಮ್ಮದೇ ರೀತಿಯಲ್ಲಿ ಚರ್ಚೆ, ವಿಮರ್ಶೆಗಳು ನಡೆಸುತ್ತಿದ್ದಾರೆ. ನಾಡಿದ್ದು ಶನಿವಾರ ಮಧ್ಯಾಹ್ನ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕಳೆದ ಮೂರು ಬಾರಿಯ ಚುನಾವಣೆಯಲ್ಲಿ ಪ್ರತಿ ಜಿಲ್ಲೆಗಳಲ್ಲಿ ಎಷ್ಟು ಶೇಕಡಾವಾರು ಮತದಾನವಾಗಿದೆ ಎಂದು ಅಂಕಿಅಂಶ ಬಹಿರಂಗಪಡಿಸಿದ್ದಾರೆ. 2013ಕ್ಕೆ ಹೋಲಿಸಿದರೆ 2018ರಲ್ಲಿ ಶೇಕಡಾ 72.44ರಷ್ಟು ಮತದಾನವಾಗಿದ್ದರೆ ಈ ಬಾರಿ ರಾಜ್ಯದಲ್ಲಿ ಒಟ್ಟಾರೆ ಶೇಕಡಾ 72.76ರಷ್ಟು ಮತದಾನವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ಅತಿಹೆಚ್ಚು ಶೇಕಡಾ 85.83ರಷ್ಟು ಮತದಾನವಾಗಿದೆ.

ಈ ವರ್ಷ ಯುವಕರು, ತೃತೀಯ ಲಿಂಗಿಗಳು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಅಶಕ್ತರು, ಹಿರಿಯ ನಾಗರಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಮತಗಟ್ಟೆಗಳಲ್ಲಿ ಮತ ಚಲಾವಣೆ ಪ್ರಕ್ರಿಯೆಯಲ್ಲಿ ಸಹಾಯ ಮಾಡಿದ ಕಾರ್ಯಕರ್ತರಿಗೆ ಮುಖ್ಯ ಚುನಾವಣಾಧಿಕಾರಿಗಳು ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT