ರಾಜ್ಯ

ಮತದಾನ ಪೂರ್ಣ ಬೆನ್ನಲ್ಲೇ ರಿಲ್ಯಾಕ್ಸ್ ಮೂಡ್'ನಲ್ಲಿ ಹೆಚ್'ಡಿ.ಕುಮಾರಸ್ವಾಮಿ: ಸಿಂಗಾಪುರಕ್ಕೆ ಪ್ರಯಾಣ

Manjula VN

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಯಶಸ್ವಿಯಾಗಿ ಮತದಾನ ನಡೆದಿದ್ದು, ಮೂರು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿದೇಶಕ್ಕೆ ಹಾರಿದ್ದಾರೆಂದು ತಿಳಿದುಬಂದಿದೆ.

ಕುಮಾರಸ್ವಾಮಿಯವರು ಬುಧವಾರ ತಡರಾತ್ರಿ ಆಪ್ತರ ಜೊತೆ ಬೆಂಗಳೂರಿನಿಂದ ಸಿಂಗಾಪೂರಕ್ಕೆ ತೆರಳಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಸಿ ವೋಟರ್ ಸಮೀಕ್ಷೆಯ ಪ್ರಕಾರ ಬಿಜೆಪಿ 83 ರಿಂದ 95 ಸ್ಥಾನ ಗಳಿಸಬಹುದು ಎಂದು ಅಂದಾಜಿಸಲಾಗಿದ್ದು, ಕಾಂಗ್ರೆಸ್ 100 ಸ್ಥಾನದಿಂದ 112 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇನ್ನು ಜೆಡಿಎಸ್ 21 ರಿಂದ 29 ಸ್ಥಾನ ಪಡೆಬಹುದು ಎಂದು ಹೇಳಿದೆ, ಪಕ್ಷೇತರ ಅಭ್ಯರ್ಥಿಗಳು ಇಬ್ಬರಿಂದ 6 ಜನ ಗೆಲ್ಲಬಹುದು ಎಂದು ಅಂದಾಜು ಲೆಕ್ಕ ನೀಡಿದೆ.

SCROLL FOR NEXT