ಜಿಲ್ಲಾಧಿಕಾರಿ ಕಚೇರಿ ಹಿಂಬಾಗದ ಅಪೂರ್ಣ ತಡೆಗೋಡೆ 
ರಾಜ್ಯ

ಮಡಿಕೇರಿ: ಡಿಸಿ ಕಚೇರಿ ಹಿಂಭಾಗದಲ್ಲಿ ಅಪೂರ್ಣ ತಡೆಗೋಡೆ; ಕಾಮಗಾರಿಯಲ್ಲಿ ವಿಳಂಬ

ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಅಪೂರ್ಣ ತಡೆಗೋಡೆ ಕಾಮಗಾರಿಯಲ್ಲಿ ವಿಳಂಬವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರಾಸಕ್ತಿ ಬಯಲಾಗಿದೆ. ಇದರ ಮೇಲೆ ಈಗ ಕಪ್ಪು ಬಣ್ಣದ ಟಾರ್ಪಲಿನ್ ಹಾಕಲಾಗಿದ್ದು, ಮಳೆಗಾಲದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. 

ಮಡಿಕೇರಿ: ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಅಪೂರ್ಣ ತಡೆಗೋಡೆ ಕಾಮಗಾರಿಯಲ್ಲಿ ವಿಳಂಬವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರಾಸಕ್ತಿ ಬಯಲಾಗಿದೆ. ಇದರ ಮೇಲೆ ಈಗ ಕಪ್ಪು ಬಣ್ಣದ ಟಾರ್ಪಲಿನ್ ಹಾಕಲಾಗಿದ್ದು, ಮಳೆಗಾಲದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. 

2022 ರ ಜುಲೈನಲ್ಲಿ  ಡಿಸಿ ಕಚೇರಿ ಹಿಂಬಾಗದಲ್ಲಿ 7.5 ಕೋಟಿ ರೂ ವೆಚ್ಚದ ತಡೆಗೋಡೆಯ ಕಳಪೆ ಗುಣಮಟ್ಟದ ಕಾಮಗಾರಿ ಬೆಳಕಿಗೆ ಬಂದಿತ್ತು. ಮಡಿಕೇರಿ-ಮಂಗಳೂರು ಹೆದ್ದಾರಿಯ ಆರಂಭದಲ್ಲಿರುವ 40 ಅಡಿ ಎತ್ತರ ಮತ್ತು 140 ಮೀಟರ್ ಅಗಲದ ತಡೆಗೋಡೆ ಕುಸಿದು ಬೀಳುವ ಹಂತದಲ್ಲಿತ್ತು. ಹಾಲಿ ಶಾಸಕ ಅಪ್ಪಚ್ಚು ರಂಜನ್ ಅವರು ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿದಾಗ ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಪಟ್ಟ ಗುತ್ತಿಗೆದಾರರ ಕಳಪೆ ಕಾಮಗಾರಿ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಆದರೆ, ಈ ಆಕ್ರೋಶ ವ್ಯಕ್ತವಾಗಿ ಸುಮಾರು ಒಂದು ವರ್ಷ ಕಳೆದರೂ ತಡೆಗೋಡೆ ತಡೆಗೋಡೆ ನಿರ್ಮಣದಿಂದ ಇನ್ನೂ ಮುಕ್ತಿಸಿಕ್ಕಿಲ್ಲ. ಕುಸಿದು ಬೀಳುವ ಸ್ಥಿತಿಯಲಿದ್ದ ಕಾಂಕ್ರೀಟ್‌ ಸ್ಲ್ಯಾಬ್‌ಗಳನ್ನು ತೆಗೆದು ನಾಲ್ಕು ತಿಂಗಳೇ ಕಳೆದಿವೆ. ಈ ಪ್ರದೇಶ ಈಗ  ಮುಂಗಾರು ಪೂರ್ವ ಮಳೆಯ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ. ತಡೆ ಗೋಡೆ ಕೆಳಗೆ ಇರುವ ಮನೆಗಳು ಕೂಡಾ ಕುಸಿಯುವ ಭೀತಿ ಎದುರಾಗಿದೆ.  ಸದ್ಯದಲ್ಲೇ ಬರಲಿರುವ ಅಪಾಯದ ಬಗ್ಗೆ ಯಾವೊಬ್ಬ ಅಧಿಕಾರಿಗಳು ಕಾಳಜಿ ತೋರುತ್ತಿಲ್ಲ’ ಎಂದು ಮಡಿಕೇರಿ ನಿವಾಸಿ ಸುಬ್ಬಯ್ಯ ಬೇಸರ ವ್ಯಕ್ತಪಡಿಸಿದರು.

ಕಾಂಕ್ರೀಟ್ ಚಪ್ಪಡಿಗಳನ್ನು ತೆಗೆದುಹಾಕಿದ್ದರೂ, ಭೂಕುಸಿತ ಪ್ರದೇಶವನ್ನು ಈಗ ಟಾರ್ಪಲಿನ್ ನಿಂದ ಮುಚ್ಚಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೊದಲಿನಂತೆ ತಡೆಗೋಡೆಯನ್ನು ಮರುನಿರ್ಮಾಣ ಮಾಡಲಾಗುವುದು ಎಂದು ತಡೆಗೋಡೆಯ ಉಸ್ತುವಾರಿ ಗುತ್ತಿಗೆದಾರ ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT