ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.! 
ರಾಜ್ಯ

ಕಾರವಾರ: ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ದುರಂತ, ಮೂವರು ಸಾವು!

ಪಂಪ್‌ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದಲ್ಲಿ ನಡೆದಿದೆ. 

ಕಾರವಾರ: ಪಂಪ್‌ ರಿಪೇರಿಗೆಂದು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದಲ್ಲಿ ನಡೆದಿದೆ. 

ಮೃತರನ್ನು ಶಿರಸಿಯ ದೇವನಿಲಯದ ನಿವಾಸಿ 48 ವರ್ಷದ ಗೋವಿಂದ ಸೋಮಯ್ಯ ಪೂಜಾರಿ, 38 ವರ್ಷದ ಸುರೇಶ್ ನಾಯರ್ ಮತ್ತು 23 ವರ್ಷದ ಗಣೇಶ್ ರಾಮದಾಸ್ ಶೇಟ್ ಎಂದು ಗುರುತಿಸಲಾಗಿದೆ. ಬಾವಿಯಲ್ಲಿ ಬಿದ್ದಿದ್ದ ಪಂಪ್ ಸೆಟ್ ತೆಗೆಯಲು ಹೋಗಿ ಈ ದುರ್ಘಟನೆ ನಡೆದಿದೆ.

ಗೋವಿಂದ ಸೋಮಯ್ಯ ಪೂಜಾರಿ ಪಂಪ್‌ ಸರಿಪಡಿಸುವಾಗ ಆಮ್ಲಜನಕ ಕೊರತೆಯಿಂದಾಗಿ ಬಾವಿಯೊಳಗೆ ಬಿದ್ದಿರುತ್ತಾರೆ. ಅವರನ್ನು ರಕ್ಷಿಸಲು ಮುಂದಾದ ಗಣೇಶ ರಾಮದಾಸ್‌ ಶೇಟ್‌ ಹಾಗೂ ಭರತನಹಳ್ಳಿಯ ಸುರೇಶ ನಾಯರ್‌ ಬಾವಿಯೊಳಗೆ ಇಳಿದಿದ್ದು, ಮೂವರೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಯಲ್ಲಾಪುರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT