ಪರಮೇಶ್ವರ್ 
ರಾಜ್ಯ

ಪರಮೇಶ್ವರ್'ಗೆ ಮತ ಹಾಕಿದರೂ ಇವಿಎಂ ವಿವಿಪ್ಯಾಟ್ ತೋರಿಸಿದ್ದು ಬಿಎಸ್'ಪಿ ಗುರುತು?

ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮುಂದಿದ ಎಂದು ಭವಿಷ್ಯ ನುಡಿಯಲಾಗಿದ್ದು, ಕಾಂಗ್ರೆಸ್‌ ಪರ ಅಲೆ ಇರುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು, ಇವಿಎಂ ಕಾರ್ಯವೈಖರಿ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

ತುಮಕೂರು: ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮುಂದಿದ ಎಂದು ಭವಿಷ್ಯ ನುಡಿಯಲಾಗಿದ್ದು, ಕಾಂಗ್ರೆಸ್‌ ಪರ ಅಲೆ ಇರುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು, ಇವಿಎಂ ಕಾರ್ಯವೈಖರಿ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವಿಎಂ ಮೇಲೆ ಮೊದಲಿನಿಂದಲೂ ಆಕ್ಷೇಪವಿದೆ. ಬ್ಯಾನ್‌ ಮಾಡಿ ಎಂದು ಹೇಳುತ್ತಲೇ ಇದ್ದೇವೆ. ಬಡಕನಹಳ್ಳಿಯ ಕೊರಟಗೆರೆಯ ಮತಗಟ್ಟೆಯೊಂದರಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಬಟನ್ ಒತ್ತಿದರೂ ಇವಿಎಂನ ವಿವಿಪ್ಯಾಟ್ ಬಿಎಸ್‌ಪಿ ಅಭ್ಯರ್ಥಿಗೆ ಮತವನ್ನು ತೋರಿಸಿದೆ. ಬಳಿಕ ಇವಿಎಂನ್ನು ಬದಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ 300 ಜನರು ತಮ್ಮ ಮತ ಹಕ್ಕು ಚಲಾಯಿಸಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆಂಬುದನ್ನು ಕಾದು ನೋಡೋಣ ಎಂದು ಹೇಳಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ತುಮಕೂರು ನಗರ ಮತ್ತು ಶಿರಾ ಹೊರತು ಪಡಿಸಿ, ಉಳಿದ ಕ್ಷೇತ್ರಗಳಲ್ಲಿ ಶೇ.80ಕ್ಕಿಂತಲೂ ಹೆಚ್ಚು ಮತದಾನವಾಗಿದೆ.ನಮಗೆ ಇರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಲಿದೆ. ಇದನ್ನೇ ಸಮೀಕ್ಷೆಗಳು ಹೇಳಿವೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಸಂಪುಟ ಸಭೆಯಲ್ಲಿಯೇ ಪಕ್ಷ ಘೋಷಿಸಿರುವ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಿದೆ ಎಂದು ಹೇಳಿದರು.

ಮಹಿಳೆಯರು, ಸಾಮಾಜಿಕವಾಗಿ ಹಿಂದುಳಿದ ಜನರು ನಮ್ಮ ಪ್ರಣಾಳಿಕೆಯನ್ನು ನಂಬಿ ಮತ ನೀಡಿದ್ದಾರೆ. ಹಾಗಾಗಿ ನಾವುಗಳು ಸಹ ಜನರ ಅಭಿಪ್ರಾಯಕ್ಕೆ ಬದ್ದತೆಯನ್ನು ತೋರಿಸಬೇಕಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT