ಜಯನಗರ ಮತ ಎಣಿಕೆ ಕೇಂದ್ರ 
ರಾಜ್ಯ

ಜಯನಗರ ಕ್ಷೇತ್ರದ ಫಲಿತಾಂಶ ಗೊಂದಲ, ಮತ ಎಣಿಕೆ ಕೇಂದ್ರದ ಬಳಿ ಬಿಜೆಪಿ-ಕಾಂಗ್ರೆಸ್ ನಾಯಕರ ವಾಗ್ವಾದ! 

ರಾಜ್ಯ ವಿಧಾನಸಭಾ ಚುನಾವಣೆಯ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ.  

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ 223 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಗೊಂದಲದ ಗೂಡಾಗಿದೆ.  

ಜಯನಗರದ ಎಸ್ಎಸ್ ಎಂ ಆರ್ ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಬೇರೆಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡರೂ ಮತಗಳನ್ನು ಪರಿಗಣಿಸುವ ವಿಷಯದಲ್ಲಿ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಮರು ಮತ ಎಣಿಕೆ ನಡೆದ ಕಾರಣ ಅಂತಿಮ ಫಲಿತಾಂಶ ಘೋಷಣೆ ವಿಳಂಬವಾಗಿದೆ. ಈ ಮಧ್ಯೆ ಮತ ಕೇಂದ್ರದ ಬಳಿ ಬಿಜೆಪಿ-ಕಾಂಗ್ರೆಸ್ ನಾಯಕರು ಧಾವಿಸಿದ್ದರು. ಈ ಹಂತದಲ್ಲಿ ನಾಯಕರ ನಡುವೆ ವಾಗ್ವಾದ ಉಂಟಾಗಿದೆ.

ಮತ ಎಣಿಕೆ ಕೇಂದ್ರದ ಬಳಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ, ತಿರಸ್ಕೃತಗೊಂಡ ಮತಗಳನ್ನು ಮರು ಎಣಿಕೆ ವೇಳೆ ಪರಿಗಣಿಸಲಾಗಿದೆ,  ಅಧಿಕಾರಿಗಳ ಸಹಿ ಇಲ್ಲದ ಮತ ಪರಿಗಣಿಸಲಾಗಿದೆ. ಹೀಗಾಗಿ ಸೌಮ್ಯ ರೆಡ್ಡಿ ಸೋಲು ಎನ್ನುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಆರ್ ಅಶೋಕ್ ಮಾತನಾಡಿದ್ದು, ದಿನೇಶ್ ಗುಂಡೂರಾವ್ ಅವರ ಕ್ಷೇತ್ರದಲ್ಲಿ ನಾವು 150 ಮತಗಳ ಅಂತರದಿಂದ ಸೋತಿದ್ದೇವೆ ಅಲ್ಲಿ ನಾವೇನೂ ಗೂಂಡಾಗಿರಿ ಮಾಡಿ ಫಲಿತಾಂಶ ಘೋಷಿಸುವಂತೆ ಒತ್ತಾಯ ಮಾಡಿಲ್ಲ. ಆದರೆ ಜಯನಗರದಲ್ಲಿ ಮರು ಮತ ಎಣಿಕೆಗೆ ಮನವಿ ಮಾಡಿದ್ದೇವೆ ಆದರೆ ಕಾಂಗ್ರೆಸ್ ನವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ಅಧಿಕಾರಿಗಳು ಮರು ಮತ ಎಣಿಕೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ. ಯಾವ ಮತಗಳನ್ನು ತಿರಸ್ಕರಿಸಬೇಕೆಂದು ಅಧಿಕಾರಿಗಳು ನಿರ್ಧರಿಸಿ ನಿಯಮದಂತೆ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT