ಸಿಎಂ ಬೊಮ್ಮಾಯಿ 
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಸಂಜೆ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.

ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಾವು ನಿರ್ಧಿಷ್ಠ ಮಟ್ಟದಲ್ಲಿ ಗೆಲುವು ಸಾಧಿಸಲಾಗಲಿಲ್ಲ. ಸಂಪೂರ್ಣ ಫಲಿತಾಂಶ ಬಂದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.

ಇನ್ನು ಇಂದಿನ ಚುನಾವಣಾ ಫಲಿತಾಂಶದಲ್ಲಿ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 120 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಆಡಳಿತಾರೂಢ ಬಿಜೆಪಿ 72 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿ ಕಳೆದ ಬಾರಿಗಿಂತ ಈ ಬಾರಿ 30ಕ್ಕೂ ಅಧಿಕ ಸ್ಥಾನ ಗಳಲ್ಲಿ ಹಿನ್ನಡೆ ಅನುಭವಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್